ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಸ್‌ಸಿಗೆ ನಾಲ್ವರ ನೇಮಕ

Last Updated 30 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ, ಕೆ.ಸಿ. ಜನರಲ್‌ ಆಸ್ಪತ್ರೆಯ ಸೂಪರಿಂಟೆಂಡೆಂಟ್‌ ಡಾ.ಎಚ್‌. ರವಿಕುಮಾರ್ ಸೇರಿದಂತೆ ನಾಲ್ವರನ್ನು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಸದಸ್ಯರನ್ನಾಗಿ ನೇಮಕ ಮಾಡುವ ಶಿಫಾರಸಿಗೆ ಕೊನೆಗೂ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ.

ಸುತ್ತೂರು ಶಿವರಾತ್ರೀಶ್ವರಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಪೂರ್ವಾಶ್ರಮದ ಸಹೋದರ, ಮುಜರಾಯಿ ಇಲಾಖೆಯ ಆಯುಕ್ತ ಷಡಕ್ಷರಿ ಸ್ವಾಮಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಡಾ.ಆರ್‌. ಲಕ್ಷ್ಮೀನಾರಾಯಣ ಮತ್ತು ರಾಯಚೂರಿನ ವಕೀಲ ಶ್ರೀಕಾಂತ್‌ ರಾವ್ ಇನ್ನುಳಿದ ಸದಸ್ಯರು. ಕೆಪಿಎಸ್‌ಸಿಯಲ್ಲಿ ಅಧ್ಯಕ್ಷರು ಸೇರಿ ಒಟ್ಟು 14 ಸದಸ್ಯರು ಇರಬೇಕು. ಖಾಲಿ ಇದ್ದ ನಾಲ್ಕು ಸ್ಥಾನಗಳನ್ನು ಇದೀಗ ಭರ್ತಿ ಮಾಡಲಾಗಿದೆ.

ಈ ನಾಲ್ವರ ಹೆಸರನ್ನು ಶಿಫಾರಸು ಮಾಡಿ ರಾಜ್ಯ ಸರ್ಕಾರ ಕಳುಹಿಸಿದ್ದ ಕಡತವನ್ನು ರಾಜ್ಯಪಾಲರು ಕಳೆದ ಆಗಸ್ಟ್‌ನಲ್ಲಿ ವಾಪಸು ಕಳುಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT