ನವದೆಹಲಿ: ‘ಒಂದು ಶ್ರೇಣಿ, ಒಂದು ಪಿಂಚಣಿ’ ಜಾರಿಗೆ ಒತ್ತಾಯಿಸಿ ಎರಡು ವರ್ಷಗಳಿಂದ ಮಾಜಿ ಯೋಧರು ಜಂತರ್ ಮಂತರ್ನಲ್ಲಿ ಧರಣಿ ನಡೆಸುತ್ತಿದ್ದ ಡೇರೆಗಳನ್ನು ಸೋಮವಾರ ತೆರವುಗೊಳಿಸಲಾಗಿದೆ.
ಐತಿಹಾಸಿಕ ಜಂತರ್ ಮಂತರ್ ಸುತ್ತಮುತ್ತ ಪ್ರತಿಭಟನೆ, ಧರಣಿಗಳನ್ನು ನಿಷೇಧಿಸುವಂತೆ ಹಸಿರು ನ್ಯಾಯಮಂಡಳಿ (ಎನ್ಜಿಟಿ) ಅ.5ರಂದು ಆದೇಶ ಹೊರಡಿಸಿತ್ತು.
ಪೊಲೀಸರ ನೆರವಿನಿಂದ ದೆಹಲಿ ಮಹಾನಗರ ಪಾಲಿಕೆ ಅಧಿಕಾರಿಗಳು ಬೃಹತ್ ಯಂತ್ರಗಳನ್ನು ಬಳಸಿ ಡೇರೆಗಳನ್ನು ನೆಲಸಮಗೊಳಿಸಿದೆ. ‘ಶಾಂತಿಯುತವಾಗಿ ನಡೆಯುತ್ತಿದ್ದ ಹೋರಾಟ ಮತ್ತು ನಮ್ಮ ಧ್ವನಿಯನ್ನು ಹತ್ತಿಕ್ಕುವ ಕ್ರಮ ಇದು’ ಎಂದು ಧರಣಿನಿರತ ಮಾಜಿ ಯೋಧರು ಹೇಳಿದ್ದಾರೆ.