ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಕತ್ತಿದ್ದರೆ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡಿ ಎಂದು ಕಣ್ಣೀರು ಹಾಕಿದ ಮಂಗಳೂರು ನಗರ ಪಾಲಿಕೆ ಮೇಯರ್

Last Updated 31 ಅಕ್ಟೋಬರ್ 2017, 7:18 IST
ಅಕ್ಷರ ಗಾತ್ರ
ADVERTISEMENT

ಮಂಗಳೂರು: ಮಂಗಳೂರು ನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ಅವರು ತಮ್ಮ ಫ್ಲ್ಯಾಟ್ ನ ಸೆಕ್ಯುರಿಟಿ ಗಾರ್ಡ್ ಮಗುವಿನ  ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ವಿರೋಧ ಪಕ್ಷದ ಬಿಜೆಪಿ ಸದಸ್ಯರು ಪಾಲಿಕೆ ಸಭೆ ನಡೆಯಲು ಅವಕಾಶ ನೀಡದೇ ಇದ್ದಾಗ, ಕಟೀಲು ದುರ್ಗಾ ಪರಮೇಶ್ವರಿ ಮೇಲೆ ಆಣೆ ಇಟ್ಟು ಕಣ್ಣೀರು ಹಾಕಿದ ಘಟನೆ ಮಂಗಳವಾರ ನಡೆಯಿತು.

ವಿರೋಧ ಪಕ್ಷದವರು ಧರಣಿ ಆರಂಭಿಸಿದ್ದರಿಂದ ೧೦.೩೦ಕ್ಕೆ ಆರಂಭವಾಗಬೇಕಿದ್ದ ಸಭೆ ಆರಂಭ ಆಗಲಿಲ್ಲ. ಮೇಯರ್ ಡೌನ್ ಡೌನ್ ಎಂದು ಕೂಗುತ್ತ ಮೇಯರ್ ಪೀಠದ ಎದುರು ಜಮಾಯಿಸಿದರು.  ಇದಕ್ಕೆ ಪ್ರತಿಕ್ರಿಯಿಸಿದ ಮೇಯರ್ ತಾಕತ್ತಿದ್ದರೆ ದೇವಸ್ಥಾನಕ್ಕೆ ಬಂದು ಪ್ರಮಾಣ ಮಾಡುವಂತೆ ವಿರೋಧ ಪಕ್ಷಕ್ಕೆ ಸವಾಲು ಹಾಕಿದರು.

ತನ್ನನ್ನು ಮೇಯರ್ ಆಗಿ ನೋಡದೆ ಓರ್ವ ತಾಯಿಯಾಗಿ ನೋಡಬೇಕು ಎಂದು ಭಿನ್ನವಿಸಿಕೊಂಡರು. ಫ್ಲ್ಯಾಟ್ ನ ಸಿಸಿ ಟಿವಿ ಫೂಟೇಜ್ ಪರಿಶೀಲಿಸಬೇಕು. ಯಾರ ಮೇಲೂ ತಾನು ಹಲ್ಲೆ ಮಾಡಿಲ್ಲ ಎಂದು ನಿರಂತರವಾಗಿ ಸಮಜಾಯಿಷಿ ‌ನೀಡುತ್ತ ಕಣ್ಣೀರು ಹಾಕಿದರು.
ಕಾಂಗ್ರೆಸ್‌ ಸದಸ್ಯರು ಡೌನ್ ಡೌನ್ ಬಿಜೆಪಿ ಎಂದು ಪ್ರತಿ ಧರಣಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT