ಮಂಗಳೂರು: ಮಂಗಳೂರು ನಗರ ಪಾಲಿಕೆ ಮೇಯರ್ ಕವಿತಾ ಸನಿಲ್ ಅವರು ತಮ್ಮ ಫ್ಲ್ಯಾಟ್ ನ ಸೆಕ್ಯುರಿಟಿ ಗಾರ್ಡ್ ಮಗುವಿನ ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಸಿ ವಿರೋಧ ಪಕ್ಷದ ಬಿಜೆಪಿ ಸದಸ್ಯರು ಪಾಲಿಕೆ ಸಭೆ ನಡೆಯಲು ಅವಕಾಶ ನೀಡದೇ ಇದ್ದಾಗ, ಕಟೀಲು ದುರ್ಗಾ ಪರಮೇಶ್ವರಿ ಮೇಲೆ ಆಣೆ ಇಟ್ಟು ಕಣ್ಣೀರು ಹಾಕಿದ ಘಟನೆ ಮಂಗಳವಾರ ನಡೆಯಿತು.