"ಐದು ಲಕ್ಷ ನಿರುದ್ಯೋಗಿಗಳಿಗೆ ಕೌಶಲ ಅಭಿವೃದ್ಧಿ ತರಬೇತಿಯನ್ನೂ ರಾಜ್ಯ ಸರ್ಕಾರ ನೀಡುತ್ತಿದೆ. ದಲಿತರು, ಮಹಿಳೆಯರು ಹಾಗೂ ಹಿಂದುಳಿದ ವರ್ಗದವರು ಕೈಗಾರಿಕಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ನೆರವಾಗುವಂತೆ ಹೊಸ ನೀತಿ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಕೆಐಎಡಿಬಿ ಪ್ರಮುಖ ಪಾತ್ರ ವಹಿಸಿದ್ದು, 165 ಕೈಗಾರಿಕಾ ಪ್ರದೇಶಗಳನ್ನು ಈ ಮಂಡಳಿ ಅಭಿವೃದ್ಧಿಪಡಿಸಿದೆ.