<p><strong>ನವದೆಹಲಿ:</strong> ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ವಿಲೀನ ಪ್ರಸ್ತಾವಗಳನ್ನು ಪರಿಶೀಲಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ಸಚಿವರ ಸಮಿತಿ ರಚಿಸಲಾಗಿದೆ.</p>.<p>ರೈಲ್ವೆ ಸಚಿವ ಪೀಯೂಷ್ ಗೋಯೆಲ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ.</p>.<p>ಬ್ಯಾಂಕಿಂಗ್ ಸುಧಾರಣಾ ಕ್ರಮಗಳ ಭಾಗವಾಗಿರುವ ವಿಲೀನ ಪ್ರಸ್ತಾವಗಳನ್ನು ಈ ಸಮಿತಿಯು ಪರಿಶೀಲಿಸಲಿದೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಟ್ವೀಟ್ ಮಾಡಿದ್ದಾರೆ.</p>.<p>ಬ್ಯಾಂಕ್ಗಳ ಬಲವರ್ಧನೆಗೆ ಕಳೆದ ವಾರ ₹ 2.11 ಲಕ್ಷ ಕೋಟಿಗಳ ಬಂಡವಾಳ ನೆರವು ಘೋಷಿಸಿದ ಸಂದರ್ಭದಲ್ಲಿ, ‘ಇದಕ್ಕೆ ಪೂರಕವಾಗಿ ಸರಣಿಯೋಪಾದಿಯಲ್ಲಿ ಬ್ಯಾಂಕಿಂಗ್ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಅರುಣ್ ಜೇಟ್ಲಿ ಪ್ರಕಟಿಸಿದ್ದರು.</p>.<p>ಬ್ಯಾಂಕ್ಗಳ ಬಲವರ್ಧನೆಗೆ ವಿಲೀನ ಪ್ರಕ್ರಿಯೆ ಚುರುಕುಗೊಳಿಸಲು ಪರ್ಯಾಯ ವ್ಯವಸ್ಥೆ ರೂಪಿಸಲು ಕೇಂದ್ರ ಸಚಿವ ಸಂಪುಟವು ಆಗಸ್ಟ್ ತಿಂಗಳಿನಲ್ಲಿ ನಿರ್ಧರಿಸಿತ್ತು.</p>.<p>ಬ್ಯಾಂಕ್ಗಳ ಆಡಳಿತ ಮಂಡಳಿಗಳಿಂದ ಬರುವ ವಿಲೀನ ಪ್ರಸ್ತಾವಗಳನ್ನು ಪರಿಶೀಲಿಸಲು ಇದರಿಂದ ಸುಲಭವಾಗಲಿದೆ.</p>.<p>ವಿಲೀನದಿಂದ ದೊಡ್ಡ ಬ್ಯಾಂಕ್ ಅಸ್ತಿತ್ವಕ್ಕೆ ಬಂದರೆ, ಬೆಳೆಯುತ್ತಿರುವ ಆರ್ಥಿಕತೆಗೆ ಅಗತ್ಯವಾದ ಸಾಲದ ಅಗತ್ಯ ಪೂರೈಸಲು ಮತ್ತು ಸರ್ಕಾರದ ಬೊಕ್ಕಸವನ್ನು ನೆಚ್ಚಿಕೊಳ್ಳದೇ ಸಂಪನ್ಮೂಲ ಸಂಗ್ರಹಿಸಲು ಸಾಧ್ಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳ ವಿಲೀನ ಪ್ರಸ್ತಾವಗಳನ್ನು ಪರಿಶೀಲಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದಲ್ಲಿ ಸಚಿವರ ಸಮಿತಿ ರಚಿಸಲಾಗಿದೆ.</p>.<p>ರೈಲ್ವೆ ಸಚಿವ ಪೀಯೂಷ್ ಗೋಯೆಲ್ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಇತರ ಸದಸ್ಯರಾಗಿದ್ದಾರೆ.</p>.<p>ಬ್ಯಾಂಕಿಂಗ್ ಸುಧಾರಣಾ ಕ್ರಮಗಳ ಭಾಗವಾಗಿರುವ ವಿಲೀನ ಪ್ರಸ್ತಾವಗಳನ್ನು ಈ ಸಮಿತಿಯು ಪರಿಶೀಲಿಸಲಿದೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ರಾಜೀವ್ ಕುಮಾರ್ ಟ್ವೀಟ್ ಮಾಡಿದ್ದಾರೆ.</p>.<p>ಬ್ಯಾಂಕ್ಗಳ ಬಲವರ್ಧನೆಗೆ ಕಳೆದ ವಾರ ₹ 2.11 ಲಕ್ಷ ಕೋಟಿಗಳ ಬಂಡವಾಳ ನೆರವು ಘೋಷಿಸಿದ ಸಂದರ್ಭದಲ್ಲಿ, ‘ಇದಕ್ಕೆ ಪೂರಕವಾಗಿ ಸರಣಿಯೋಪಾದಿಯಲ್ಲಿ ಬ್ಯಾಂಕಿಂಗ್ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದು ಅರುಣ್ ಜೇಟ್ಲಿ ಪ್ರಕಟಿಸಿದ್ದರು.</p>.<p>ಬ್ಯಾಂಕ್ಗಳ ಬಲವರ್ಧನೆಗೆ ವಿಲೀನ ಪ್ರಕ್ರಿಯೆ ಚುರುಕುಗೊಳಿಸಲು ಪರ್ಯಾಯ ವ್ಯವಸ್ಥೆ ರೂಪಿಸಲು ಕೇಂದ್ರ ಸಚಿವ ಸಂಪುಟವು ಆಗಸ್ಟ್ ತಿಂಗಳಿನಲ್ಲಿ ನಿರ್ಧರಿಸಿತ್ತು.</p>.<p>ಬ್ಯಾಂಕ್ಗಳ ಆಡಳಿತ ಮಂಡಳಿಗಳಿಂದ ಬರುವ ವಿಲೀನ ಪ್ರಸ್ತಾವಗಳನ್ನು ಪರಿಶೀಲಿಸಲು ಇದರಿಂದ ಸುಲಭವಾಗಲಿದೆ.</p>.<p>ವಿಲೀನದಿಂದ ದೊಡ್ಡ ಬ್ಯಾಂಕ್ ಅಸ್ತಿತ್ವಕ್ಕೆ ಬಂದರೆ, ಬೆಳೆಯುತ್ತಿರುವ ಆರ್ಥಿಕತೆಗೆ ಅಗತ್ಯವಾದ ಸಾಲದ ಅಗತ್ಯ ಪೂರೈಸಲು ಮತ್ತು ಸರ್ಕಾರದ ಬೊಕ್ಕಸವನ್ನು ನೆಚ್ಚಿಕೊಳ್ಳದೇ ಸಂಪನ್ಮೂಲ ಸಂಗ್ರಹಿಸಲು ಸಾಧ್ಯವಾಗಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>