ಕನ್ನಡ ರಾಜ್ಯೋತ್ಸವ ಪ್ರಯುಕ್ತ ವೇದಿಕೆಯ ಅಧ್ಯಕ್ಷ ನೀಲೇಶಗೌಡ ಅವರ ನೇತೃತ್ವದಲ್ಲಿ ನಗರದಲ್ಲಿ ಮೆರವಣಿಗೆ ಹಮ್ಮಿಕೊಂಡಿದ್ದ ಕಾರ್ಯಕರ್ತರು, ಮಧ್ಯಾಹ್ನ 1 ಗಂಟೆ ಸುಮಾರಿಗೆ ಒಪೆರಾ ಜಂಕ್ಷನ್ಗೆ ಬಂದರು. ಶಾಸಕ ಎನ್.ಎ.ಹ್ಯಾರಿಸ್ ಅವರ ಭಾವಚಿತ್ರವಿದ್ದ ಬ್ಯಾನರೊಂದರಲ್ಲಿ ಇಂಗ್ಲಿಷ್ ಅಕ್ಷರಗಳಿರುವುದನ್ನು ಗಮನಿಸಿದ ಅವರು, ಅದನ್ನು ಹರಿದು ಹಾಕಿ ಘೋಷಣೆಗಳನ್ನು ಕೂಗಿದರು.