ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕೀಕರಣ ಹೋರಾಟ: ಸಂಸ್ಥಾನಿಕರು ಮೊದಲಿಗರು

Last Updated 2 ನವೆಂಬರ್ 2017, 6:16 IST
ಅಕ್ಷರ ಗಾತ್ರ

ಜಮಖಂಡಿ: ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದವರಲ್ಲಿ ಜಮಖಂಡಿಯ ಪಟವರ್ಧನ ಸಂಸ್ಥಾನಿಕರು ಮೊದಲಿಗರು. ಕುಡಚಿ–ಬಾಗಲಕೋಟೆ ರೈಲ್ವೆ ಮಾರ್ಗ ನಿರ್ಮಾಣಕ್ಕಾಗಿ ಬ್ರಿಟಿಷ್‌ ಸರ್ಕಾರವೇ ಸಮೀಕ್ಷೆ ಕೈಗೊಂಡಿತ್ತು. ಅದರಲ್ಲಿ ಪಟವರ್ಧನ ಸಂಸ್ಥಾನಿಕರ ಪಾತ್ರ ಇರಲಿಲ್ಲ ಎಂದು ಶಾಸಕ ಸಿದ್ದು ನ್ಯಾಮಗೌಡ ಅಭಿಪ್ರಾಯಪಟ್ಟರು.

ನಗರದ ಹೊಕ್ಕಳಬಾವಿ ಮೈದಾನದಲ್ಲಿ ಕನ್ನಡ ಸಂಘ ಹಾಗೂ ತಾಲ್ಲೂಕು ಆಡಳಿತದ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಮತ್ತು ಕನ್ನಡ ಸಂಘದ ಸುವರ್ಣ ಸಂಭ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

50 ವರ್ಷಗಳ ಇತಿಹಾಸದಲ್ಲಿ ರಾಜ್ಯ, ಅಂತರರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ, ಕಬಡ್ಡಿ ಹಾಗೂ ಸೈಕ್ಲಿಂಗ್‌ ಟೂರ್ನಿಗಳನ್ನು ಆಯೋಜಿಸಿದ ಹೆಮ್ಮೆ ಸ್ಥಳೀಯ ಕನ್ನಡ ಸಂಘಕ್ಕೆ ಇದೆ ಎಂದರು.

ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ಮಾತನಾಡಿ, ಮುಂಬರುವ ದಿನಗಳಲ್ಲಿ ನಗರದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲು ಅವಕಾಶ ನೀಡಲು ಶಾಸಕರ ನೇತೃತ್ವದಲ್ಲಿ ಈ ಭಾಗದ ಜನಪ್ರತಿನಿಧಿಗಳು, ಸಾಹಿತಿಗಳು ಸಾಹಿತ್ಯ ಪರಿಷತ್ತಿನ ರಾಜ್ಯ ಹಾಗೂ ಕೇಂದ್ರ ಸಮಿತಿ ಪದಾಧಿಕಾರಿಗಳ ಮೇಲೆ ಒತ್ತಡ ಹೇರಬೇಕು. ನಗರದಲ್ಲಿ ಕನ್ನಡ ಭವನ ನಿರ್ಮಾಣದ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು ಎಂದರು.

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಜಿ.ಎಸ್‌. ನ್ಯಾಮಗೌಡ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಮಾತನಾಡಿದರು. ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಕನ್ನಡ ಧ್ವಜಾರೋಹಣ ನೆರವೇರಿಸಿದರು.

ಭುವನೇಶ್ವರಿದೇವಿ ಭಾವಚಿತ್ರದ ಭವ್ಯ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಆನೆಯ ಮೇಲೆ ಜರುಗಿತು. ನವಿಲು ಕುಣಿತ ಕಲಾವಿದರು, ಶಾಲಾ ಮಕ್ಕಳು, ಮಹಿಳೆಯರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT