<p><strong>ಅರಸೀಕೆರೆ: </strong>ರಾಜ್ಯೋತ್ಸವದ ಅಂಗವಾಗಿ ನಗರದ ಹಳೆ ಸರ್ಕಾರಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಲಾ ತಂಡಗಳ ಮೆರವಣಿಗೆ ಹಾಗೂ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಬುಧವಾರ ಸಾರ್ವಜನಿಕರ ಗಮನ ಸೆಳೆಯಿತು.</p>.<p>ತಾಯಿ ಭುವನೇಶ್ವರಿ ಮೂರ್ತಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ನಗರಸಭಾ ಅಧ್ಯಕ್ಷ ಎಂ.ಸಮೀವುಲ್ಲಾ, ತಹಶೀಲ್ದಾರ್ ಎನ್.ವಿ. ನಟೇಶ್, ಡಿಎಸ್ಪಿ ತಿಪ್ಪಣ್ಣನವರ್ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಬಳಿಕ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ರಕ್ಷಕ ದಳ, ಎನ್.ಸಿ.ಸಿ, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿದಂತೆ ವಿವಿಧ 16 ಶಾಲೆಗಳ ಮಕ್ಕಳು ಪಥ ಸಂಚಲನ ನಡೆಸಿದರು.</p>.<p>ತಹಶೀಲ್ದಾರ್ ಎನ್.ವಿ. ನಟೇಶ್ ರಾಷ್ಟ್ರ ಧ್ವಜಾರೋಹಣ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಕನ್ನಡ ಧ್ವಜಾರೋಹಣ ನೆರವೇರಿಸಿದರು.<br /> ಶಾಸಕ ಶಿವಲಿಂಗೇಗೌಡ ಮಾತನಾಡಿ, ‘ಕನ್ನಡ ನಾಡು ಉದಯವಾಗಿ 6 ದಶಕ ಕಳೆದರೂ ಕನ್ನಡ ಭಾಷೆ, ಸಂಕಷ್ಟಗಳಿಂದ ಮುಕ್ತವಾಗಿಲ್ಲ. ಭಾಷೆಯ ಅಸ್ತಿತ್ವಕ್ಕಾಗಿ ಸಾಹಿತಿಗಳು, ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ’ ಎಂದು ವಿಷಾದಿಸಿದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹನುಮಯ್ಯ, ಮೃತ್ಯುಂಜಯ, ವೀರಕ್ಕ ಕೆ.ನಾಗರತ್ನಮ್ಮ, ಸೋಮಶೇಖರನ್, ಶೇಖರ್ ಸಂಕೊಂಡನಹಳ್ಳಿ, ಸಂತೋಷ್, ಆದರ್ಶ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.</p>.<p>ನಂತರ ಶಾಲಾ ಮಕ್ಕಳು ನಾಡಿನ ಸಂಸ್ಕೃತಿ, ಪರಂಪರೆ ಬಿಂಬಿಸುವ ನೃತ್ಯ ಪ್ರದರ್ಶಿಸಿದರು. ಮೊದಲಿಗೆ ತರಳಬಾಳು ಅನುಭವ ಮಂಟಪ ಶಾಲಾ ಮಕ್ಕಳು ಕನ್ನಡ ನಾಡು ನುಡಿ ಹಿರಿಮೆ ಬಗ್ಗೆ ನಡೆಸಿಕೊಟ್ಟ ನೃತ್ಯ ರೂಪಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.</p>.<p>ಕನ್ನಿಕಾ ಎಚ್.ಪಿ.ಎಸ್ ಹಾಗೂ ಸೇವಾ ಸಂಕಲ್ಪ ಶಾಲೆಯ ಮಕ್ಕಳು ‘ಹಚ್ಚೇವು ಕನ್ನಡದ ದೀಪ’, ಬಸವರಾಜೇಂದ್ರ ಪ್ರೌಢಶಾಲೆ ವಿದ್ಯಾರ್ಥಿಗಳು ‘ಕನ್ನಡ ನಾಡಿನ ಜೀವನದಿ ಕಾವೇರಿ’ ಗಾಯನಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಟೇಲ್ ಶಿವಪ್ಪ, ಲೋಲಾಕ್ಷಮ್ಮ ಮಹದೇವಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಂಜುಳಾಬಾಯಿ, ನಗರಸಭಾ ಉಪಾಧ್ಯಕ್ಷ ಪಾರ್ಥಸಾರಥಿ, ಡಿಎಸ್ಪಿ ಸದಾನಂದ ತಿಪ್ಪಣ್ಣನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಕಾರ್ಯನಿರ್ವಹಕಾಧಿಕಾರಿ ಕೃಷ್ಣಮೂರ್ತಿ, ಪೌರಾಯುಕ್ತ ಪರಮೇಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ: </strong>ರಾಜ್ಯೋತ್ಸವದ ಅಂಗವಾಗಿ ನಗರದ ಹಳೆ ಸರ್ಕಾರಿ ಶಾಲಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕಲಾ ತಂಡಗಳ ಮೆರವಣಿಗೆ ಹಾಗೂ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಬುಧವಾರ ಸಾರ್ವಜನಿಕರ ಗಮನ ಸೆಳೆಯಿತು.</p>.<p>ತಾಯಿ ಭುವನೇಶ್ವರಿ ಮೂರ್ತಿಗೆ ಶಾಸಕ ಕೆ.ಎಂ.ಶಿವಲಿಂಗೇಗೌಡ, ನಗರಸಭಾ ಅಧ್ಯಕ್ಷ ಎಂ.ಸಮೀವುಲ್ಲಾ, ತಹಶೀಲ್ದಾರ್ ಎನ್.ವಿ. ನಟೇಶ್, ಡಿಎಸ್ಪಿ ತಿಪ್ಪಣ್ಣನವರ್ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.</p>.<p>ಬಳಿಕ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ರಕ್ಷಕ ದಳ, ಎನ್.ಸಿ.ಸಿ, ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿದಂತೆ ವಿವಿಧ 16 ಶಾಲೆಗಳ ಮಕ್ಕಳು ಪಥ ಸಂಚಲನ ನಡೆಸಿದರು.</p>.<p>ತಹಶೀಲ್ದಾರ್ ಎನ್.ವಿ. ನಟೇಶ್ ರಾಷ್ಟ್ರ ಧ್ವಜಾರೋಹಣ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಕನ್ನಡ ಧ್ವಜಾರೋಹಣ ನೆರವೇರಿಸಿದರು.<br /> ಶಾಸಕ ಶಿವಲಿಂಗೇಗೌಡ ಮಾತನಾಡಿ, ‘ಕನ್ನಡ ನಾಡು ಉದಯವಾಗಿ 6 ದಶಕ ಕಳೆದರೂ ಕನ್ನಡ ಭಾಷೆ, ಸಂಕಷ್ಟಗಳಿಂದ ಮುಕ್ತವಾಗಿಲ್ಲ. ಭಾಷೆಯ ಅಸ್ತಿತ್ವಕ್ಕಾಗಿ ಸಾಹಿತಿಗಳು, ಕನ್ನಡ ಪರ ಸಂಘಟನೆಗಳು ಹೋರಾಟ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ’ ಎಂದು ವಿಷಾದಿಸಿದರು.</p>.<p>ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹನುಮಯ್ಯ, ಮೃತ್ಯುಂಜಯ, ವೀರಕ್ಕ ಕೆ.ನಾಗರತ್ನಮ್ಮ, ಸೋಮಶೇಖರನ್, ಶೇಖರ್ ಸಂಕೊಂಡನಹಳ್ಳಿ, ಸಂತೋಷ್, ಆದರ್ಶ ಹಾಗೂ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ನೆನಪಿನ ಕಾಣಿಕೆ ನೀಡಲಾಯಿತು.</p>.<p>ನಂತರ ಶಾಲಾ ಮಕ್ಕಳು ನಾಡಿನ ಸಂಸ್ಕೃತಿ, ಪರಂಪರೆ ಬಿಂಬಿಸುವ ನೃತ್ಯ ಪ್ರದರ್ಶಿಸಿದರು. ಮೊದಲಿಗೆ ತರಳಬಾಳು ಅನುಭವ ಮಂಟಪ ಶಾಲಾ ಮಕ್ಕಳು ಕನ್ನಡ ನಾಡು ನುಡಿ ಹಿರಿಮೆ ಬಗ್ಗೆ ನಡೆಸಿಕೊಟ್ಟ ನೃತ್ಯ ರೂಪಕ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.</p>.<p>ಕನ್ನಿಕಾ ಎಚ್.ಪಿ.ಎಸ್ ಹಾಗೂ ಸೇವಾ ಸಂಕಲ್ಪ ಶಾಲೆಯ ಮಕ್ಕಳು ‘ಹಚ್ಚೇವು ಕನ್ನಡದ ದೀಪ’, ಬಸವರಾಜೇಂದ್ರ ಪ್ರೌಢಶಾಲೆ ವಿದ್ಯಾರ್ಥಿಗಳು ‘ಕನ್ನಡ ನಾಡಿನ ಜೀವನದಿ ಕಾವೇರಿ’ ಗಾಯನಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯರಾದ ಪಟೇಲ್ ಶಿವಪ್ಪ, ಲೋಲಾಕ್ಷಮ್ಮ ಮಹದೇವಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಂಜುಳಾಬಾಯಿ, ನಗರಸಭಾ ಉಪಾಧ್ಯಕ್ಷ ಪಾರ್ಥಸಾರಥಿ, ಡಿಎಸ್ಪಿ ಸದಾನಂದ ತಿಪ್ಪಣ್ಣನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ಕಾರ್ಯನಿರ್ವಹಕಾಧಿಕಾರಿ ಕೃಷ್ಣಮೂರ್ತಿ, ಪೌರಾಯುಕ್ತ ಪರಮೇಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>