ಬೆಂಗಳೂರು: ‘ಬಿಜೆಪಿ ಆರಂಭಿಸಿರುವ ಈ ಪರಿವರ್ತನಾ ಯಾತ್ರೆ ಕರ್ನಾಟಕದ ಮುಖ್ಯಮಂತ್ರಿಯನ್ನು ಬದಲಿಸಲು ಮಾತ್ರ ಅಲ್ಲ. ಇದು ಕರ್ನಾಟಕದ ಸ್ಥಿತಿಯನ್ನು ಬದಲಿಸಲು, ಇಲ್ಲಿನ ಕೃಷಿ, ಯುವಕರ ಸ್ಥಿತಿ, ಕಾನೂನು ಸುವ್ಯವಸ್ಥೆ ಬದಲಿಸಲು ಆರಂಭವಾಗಿರುವ ಪರಿವರ್ತನಾ ಯಾತ್ರೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದರು.