ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ದುರಾಡಳಿತ ಮತ್ತು ಭ್ರಷ್ಟಾಚಾರದ ನೇತೃತ್ವ ವಹಿಸಿದ ಮುಖ್ಯಮಂತ್ರಿಯೊಬ್ಬರು ಜೈಲಿಗೆ ಹೋಗಿದ್ದು ಏನಾದರೂ ಇದ್ದರೆ ಅದು ಕರ್ನಾಟಕದಲ್ಲಿ ಮಾತ್ರ. ಬಿಜೆಪಿ ಅರ್ಧ ಜನ ಜೈಲಿಗೆ ಹೋಗಿದ್ದಾರೆ. ಅರ್ಧ ಜನ ಜಾಮೀನಿನ ಮೇಲೆ ಹೊರಗಿದ್ದಾರೆ. ಅವರ ಅರ್ಥದಲ್ಲಿ ಜೈಲಿನಿಂದ ಹೊರಗೆ ಬರುವುದೇ ಪರಿವರ್ತನೆ ಇರಬಹುದು’ ಎಂದು ವ್ಯಂಗ್ಯವಾಡಿದರು.