ಬೆಂಗಳೂರು: ದಲಿತಪರ ಹೋರಾಟಗಾರ, ಚಿಂತಕ, ಸಾಹಿತಿ ಲಕ್ಷ್ಮಣ್ಜೀ (60) ಅವರು ಅನಾರೋಗ್ಯದಿಂದ ನಗರದ ನಂದಿನಿ ಲೇ ಔಟ್ ಬಡಾವಣೆಯ ತಮ್ಮ ನಿವಾಸದಲ್ಲಿ ಬುಧವಾರ ರಾತ್ರಿ ನಿಧನರಾದರು.
ಅವರಿಗೆ ಪತ್ನಿ, ಪುತ್ರಿ ಮತ್ತು ಇಬ್ಬರು ಪುತ್ರರು ಇದ್ದಾರೆ. ಸದಾಶಿವನಗರದ ಹೈದರಾಬಾದ್–ಕರ್ನಾಟಕ ಎಜುಕೇಷನ್ ಸೊಸೈಟಿಯ ಕಾಲೇಜಿನಲ್ಲಿ ಗುಮಾಸ್ತರಾಗಿ ಸೇವೆ ಸಲ್ಲಿಸಿ, ಇತ್ತೀಚೆಗಷ್ಟೇ ಅವರು ನಿವೃತ್ತರಾಗಿದ್ದರು.
ಜಾತಿ ವಿನಾಶ ವೇದಿಕೆಯ ಅಧ್ಯಕ್ಷರಾಗಿ ವಿವಿಧ ಜನಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಸಾಹಿತ್ಯ ಪರಿಷತ್ತು, ಸಾಹಿತ್ಯ ಅಕಾಡೆಮಿ, ಸೇರಿ ಹಲವು ಗೌರವಗಳಿಗೆ ಪಾತ್ರರಾಗಿದ್ದರು.