<p><strong>ಬೆಂಗಳೂರು:</strong> ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ 2017ಕ್ಕೆ (ಕೆಪಿಎಂಇ) ಮಾಡಿರುವ ತಿದ್ದುಪಡಿಯಲ್ಲಿನ ಕೆಲವು ಅಂಶಗಳನ್ನು ಕೈಬಿಡುವಂತೆ ಆಗ್ರಹಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕ ಶುಕ್ರವಾರ ಹೊರ ರೋಗಿಗಳ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿದೆ.</p>.<p>ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾಗುವ ಪ್ರತಿಭಟನೆ 24 ತಾಸು ನಡೆಯುತ್ತದೆ. ಇದಕ್ಕೆ ಎಲ್ಲಾ ಖಾಸಗಿ ಆಸ್ಪತ್ರೆಗಳು ಬೆಂಬಲ ಸೂಚಿಸಿದ್ದು, ತುರ್ತು ಚಿಕಿತ್ಸೆ ಹೊರತುಪಡಿಸಿ ಎಲ್ಲಾ ತಪಾಸಣೆಗಳು ಸ್ಥಗಿತಗೊಳಿಸಲು ನಿರ್ಧರಿಸಿವೆ. ‘40,000 ಸಂಸ್ಥೆಗಳ ಸುಮಾರು 60,000 ವೈದ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ಐಎಂಎ ರಾಜ್ಯ ಘಟಕದ ಗೌರವ ಕಾರ್ಯದರ್ಶಿ ಬಿ. ವೀರಪ್ಪ ತಿಳಿಸಿದರು.</p>.<p><strong>ಯಾವೆಲ್ಲ ಸಂಸ್ಥೆಗಳ ಬೆಂಬಲ:</strong> ‘ಸಣ್ಣ, ಮಧ್ಯಮ ಮತ್ತು ಬೃಹತ್ ಆಸ್ಪತ್ರೆಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ದಂತ ವೈದ್ಯರ ಒಕ್ಕೂಟ, ಪ್ರಯೋಗಾಲಯಗಳು, ಕರ್ನಾಟಕ ಖಾಸಗಿ ಆಸ್ಪತ್ರೆಗಳ ಒಕ್ಕೂಟ, ವಿವಿಧ ತಜ್ಞ ವೈದ್ಯರ ಸಂಘಟನೆಗಳು, ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್, ರಕ್ತನಿಧಿಗಳು ಪ್ರತಿಭಟನೆಗೆ ಬೆಂಬಲಿಸಿವೆ’ ಎಂದು ಮಾಹಿತಿ ನೀಡಿದರು.</p>.<p>‘ಒಂದು ಕಡೆ ಗುಂಪು ಕಟ್ಟಿಕೊಂಡು ಅಥವಾ ಜಾಥಾ ನಡೆಸಿ ಪ್ರತಿಭಟಿಸುವುದಿಲ್ಲ. ಖಾಸಗಿ ವೈದ್ಯರಿಗೆ ಮಾರಕವಾಗಿರುವ ತಿದ್ದುಪಡಿಗಳನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ನೀಡುತ್ತೇವೆ. ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಕ್ಕೆ ಸಾರ್ವಜನಿಕರಿಗೆ ಕ್ಷೇಮೆ ಕೋರಿ, ನಮಗೆ ಬೆಂಬಲ ನೀಡುವಂತೆ ಕರಪತ್ರಗಳನ್ನು ಹಂಚಿದ್ದೇವೆ’ ಎಂದು ವಿವರಿಸಿದರು.</p>.<p><strong>ಸರ್ಕಾರಿ ವೈದ್ಯರ ಕಡ್ಡಾಯ ಹಾಜರಿಗೆ ಆದೇಶ</strong></p>.<p>ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆ ವೈದ್ಯರು ಸೇವೆ ಸ್ಥಗಿತಗೊಳಿಸಲಿರುವುದರಿಂದ ಜನರಿಗೆ ತೊಂದರೆ ಆಗದಂತೆ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬೇಕೆಂದು ಸರ್ಕಾರ ಸೂಚನೆ ನೀಡಿದೆ.</p>.<p>ಎಲ್ಲ ವೈದ್ಯರು ಮತ್ತು ವೈದ್ಯಕೀಯ ಸಹಾಯಕರು (ಶುಕ್ರವಾರ) ರಜೆ ರದ್ದುಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕಲ್ಯಾಣ ಸೇವೆಗಳ ಆಯುಕ್ತ ಮನೋಜ್ಕುಮಾರ್ ಮೀನಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ರೋಗಿಗಳಿಗೆ ಅನಾನುಕೂಲ ಆಗದಂತೆ ತ್ವರಿತ ಸೇವೆ ದೊರೆಯುವಂತೆ ಮಾಡಲಾಗುವುದು. ಖಾಸಗಿ ವೈದ್ಯರ ಒಂದು ದಿನದ ಮುಷ್ಕರ ಆಗಿರುವುದರಿಂದ ವೈದ್ಯರ ಸಂಘದ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು ಆಯಾಯ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ಮಾಡಿ ಪರಿಸ್ಥಿತಿ ಬಗ್ಗೆ ಚರ್ಚಿಸಬೇಕು ಮನೋಜ್ ಕುಮಾರ್ ಮೀನಾ ಹೇಳಿದರು.</p>.<p><strong>ಮಾತುಕತೆಗೆ ಕರೆದಿಲ್ಲ</strong></p>.<p>ರಾಜ್ಯ ಸರ್ಕಾರ ಮಾತುಕತೆಗೆ ಕರೆದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ ಗೌರವ ಕಾರ್ಯದರ್ಶಿ ಡಾ. ಬಿ.ವೀರಣ್ಣ ತಿಳಿಸಿದರು.</p>.<p>ಮುಖ್ಯಮಂತ್ರಿ ಸಂಘದ ಪದಾಧಿಕಾರಿ ಒಬ್ಬರನ್ನು ಕರೆದಿದ್ದರು. ಅದು ಅಧಿಕೃತ ಆಹ್ವಾನ ಆಗಿಲ್ಲದ ಕಾರಣ ಅವರು ಹೋಗಲಿಲ್ಲ. ಸರ್ಕಾರ ಕರೆದರೆ ಸಂಘದ ಎಲ್ಲ ಪದಾಧಿಕಾರಿಗಳೂ ಹೋಗುತ್ತೇವೆ ಎಂದು ಅವರು ಹೇಳಿದರು.</p>.<p><strong>ಮುಷ್ಕರ ನಡೆಸದಂತೆ ಮುಖ್ಯಮಂತ್ರಿ ಮನವಿ</strong></p>.<p>ಖಾಸಗಿ ಆಸ್ಪತ್ರೆ ವೈದ್ಯರು ಆಸ್ಪತ್ರೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಇಳಿಯಬಾರದು. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>‘ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಈಗಾಗಲೇ ಒಂದು ಬಾರಿ ಚರ್ಚೆ ನಡೆಸಲಾಗಿದೆ. ಅವರ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸುತ್ತದೆ. ಇದೆಲ್ಲವೂ ಸದನದಲ್ಲಿ ನಿರ್ಧಾರ ಆಗಬೇಕಿದೆ’ ಎಂದು ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.</p>.<p>ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಬಳಿಕ ಜಂಟಿ ಸದನ ಸಮಿತಿಗೆ ಒಪ್ಪಿಸಲಾಗಿತ್ತು. ಈ ಸಮಿತಿ ಅನೇಕ ಸಭೆಗಳನ್ನು ನಡೆಸಿ ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿದೆ. ಮಸೂದೆ ಪರಿಷ್ಕರಿಸಿ, ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.</p>.<p><strong>ಬಂದ್ನಿಂದ ಏನೆಲ್ಲ ವ್ಯತ್ಯಯ</strong></p>.<p>* ಔಷಧ ಅಂಗಡಿಗಳು ಇರುವುದಿಲ್ಲ</p>.<p>* ಕ್ಲಿನಿಕ್ಗಳು ಬಂದ್ ಆಗಲಿವೆ</p>.<p>* ರಕ್ತನಿಧಿಗಳು ಕಾರ್ಯನಿರ್ವಹಿಸುವುದಿಲ್ಲ</p>.<p>* ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ತಪಾಸಣೆ ಇರುವುದಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ 2017ಕ್ಕೆ (ಕೆಪಿಎಂಇ) ಮಾಡಿರುವ ತಿದ್ದುಪಡಿಯಲ್ಲಿನ ಕೆಲವು ಅಂಶಗಳನ್ನು ಕೈಬಿಡುವಂತೆ ಆಗ್ರಹಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕ ಶುಕ್ರವಾರ ಹೊರ ರೋಗಿಗಳ ಚಿಕಿತ್ಸಾ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ಮುಂದಾಗಿದೆ.</p>.<p>ಬೆಳಿಗ್ಗೆ 8ಗಂಟೆಗೆ ಪ್ರಾರಂಭವಾಗುವ ಪ್ರತಿಭಟನೆ 24 ತಾಸು ನಡೆಯುತ್ತದೆ. ಇದಕ್ಕೆ ಎಲ್ಲಾ ಖಾಸಗಿ ಆಸ್ಪತ್ರೆಗಳು ಬೆಂಬಲ ಸೂಚಿಸಿದ್ದು, ತುರ್ತು ಚಿಕಿತ್ಸೆ ಹೊರತುಪಡಿಸಿ ಎಲ್ಲಾ ತಪಾಸಣೆಗಳು ಸ್ಥಗಿತಗೊಳಿಸಲು ನಿರ್ಧರಿಸಿವೆ. ‘40,000 ಸಂಸ್ಥೆಗಳ ಸುಮಾರು 60,000 ವೈದ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಾರೆ’ ಎಂದು ಐಎಂಎ ರಾಜ್ಯ ಘಟಕದ ಗೌರವ ಕಾರ್ಯದರ್ಶಿ ಬಿ. ವೀರಪ್ಪ ತಿಳಿಸಿದರು.</p>.<p><strong>ಯಾವೆಲ್ಲ ಸಂಸ್ಥೆಗಳ ಬೆಂಬಲ:</strong> ‘ಸಣ್ಣ, ಮಧ್ಯಮ ಮತ್ತು ಬೃಹತ್ ಆಸ್ಪತ್ರೆಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ದಂತ ವೈದ್ಯರ ಒಕ್ಕೂಟ, ಪ್ರಯೋಗಾಲಯಗಳು, ಕರ್ನಾಟಕ ಖಾಸಗಿ ಆಸ್ಪತ್ರೆಗಳ ಒಕ್ಕೂಟ, ವಿವಿಧ ತಜ್ಞ ವೈದ್ಯರ ಸಂಘಟನೆಗಳು, ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್, ರಕ್ತನಿಧಿಗಳು ಪ್ರತಿಭಟನೆಗೆ ಬೆಂಬಲಿಸಿವೆ’ ಎಂದು ಮಾಹಿತಿ ನೀಡಿದರು.</p>.<p>‘ಒಂದು ಕಡೆ ಗುಂಪು ಕಟ್ಟಿಕೊಂಡು ಅಥವಾ ಜಾಥಾ ನಡೆಸಿ ಪ್ರತಿಭಟಿಸುವುದಿಲ್ಲ. ಖಾಸಗಿ ವೈದ್ಯರಿಗೆ ಮಾರಕವಾಗಿರುವ ತಿದ್ದುಪಡಿಗಳನ್ನು ಕೈಬಿಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ ನೀಡುತ್ತೇವೆ. ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸುತ್ತಿರುವುದಕ್ಕೆ ಸಾರ್ವಜನಿಕರಿಗೆ ಕ್ಷೇಮೆ ಕೋರಿ, ನಮಗೆ ಬೆಂಬಲ ನೀಡುವಂತೆ ಕರಪತ್ರಗಳನ್ನು ಹಂಚಿದ್ದೇವೆ’ ಎಂದು ವಿವರಿಸಿದರು.</p>.<p><strong>ಸರ್ಕಾರಿ ವೈದ್ಯರ ಕಡ್ಡಾಯ ಹಾಜರಿಗೆ ಆದೇಶ</strong></p>.<p>ರಾಜ್ಯದ ಎಲ್ಲ ಖಾಸಗಿ ಆಸ್ಪತ್ರೆ ವೈದ್ಯರು ಸೇವೆ ಸ್ಥಗಿತಗೊಳಿಸಲಿರುವುದರಿಂದ ಜನರಿಗೆ ತೊಂದರೆ ಆಗದಂತೆ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬೇಕೆಂದು ಸರ್ಕಾರ ಸೂಚನೆ ನೀಡಿದೆ.</p>.<p>ಎಲ್ಲ ವೈದ್ಯರು ಮತ್ತು ವೈದ್ಯಕೀಯ ಸಹಾಯಕರು (ಶುಕ್ರವಾರ) ರಜೆ ರದ್ದುಪಡಿಸಲಾಗಿದೆ ಎಂದು ಆರೋಗ್ಯ ಮತ್ತು ಕಲ್ಯಾಣ ಸೇವೆಗಳ ಆಯುಕ್ತ ಮನೋಜ್ಕುಮಾರ್ ಮೀನಾ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ರೋಗಿಗಳಿಗೆ ಅನಾನುಕೂಲ ಆಗದಂತೆ ತ್ವರಿತ ಸೇವೆ ದೊರೆಯುವಂತೆ ಮಾಡಲಾಗುವುದು. ಖಾಸಗಿ ವೈದ್ಯರ ಒಂದು ದಿನದ ಮುಷ್ಕರ ಆಗಿರುವುದರಿಂದ ವೈದ್ಯರ ಸಂಘದ ಪದಾಧಿಕಾರಿಗಳ ಜತೆ ಮಾತುಕತೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.</p>.<p>ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು ಆಯಾಯ ಜಿಲ್ಲಾಧಿಕಾರಿ ಹಾಗೂ ಎಸ್ಪಿ ಭೇಟಿ ಮಾಡಿ ಪರಿಸ್ಥಿತಿ ಬಗ್ಗೆ ಚರ್ಚಿಸಬೇಕು ಮನೋಜ್ ಕುಮಾರ್ ಮೀನಾ ಹೇಳಿದರು.</p>.<p><strong>ಮಾತುಕತೆಗೆ ಕರೆದಿಲ್ಲ</strong></p>.<p>ರಾಜ್ಯ ಸರ್ಕಾರ ಮಾತುಕತೆಗೆ ಕರೆದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಘದ ಗೌರವ ಕಾರ್ಯದರ್ಶಿ ಡಾ. ಬಿ.ವೀರಣ್ಣ ತಿಳಿಸಿದರು.</p>.<p>ಮುಖ್ಯಮಂತ್ರಿ ಸಂಘದ ಪದಾಧಿಕಾರಿ ಒಬ್ಬರನ್ನು ಕರೆದಿದ್ದರು. ಅದು ಅಧಿಕೃತ ಆಹ್ವಾನ ಆಗಿಲ್ಲದ ಕಾರಣ ಅವರು ಹೋಗಲಿಲ್ಲ. ಸರ್ಕಾರ ಕರೆದರೆ ಸಂಘದ ಎಲ್ಲ ಪದಾಧಿಕಾರಿಗಳೂ ಹೋಗುತ್ತೇವೆ ಎಂದು ಅವರು ಹೇಳಿದರು.</p>.<p><strong>ಮುಷ್ಕರ ನಡೆಸದಂತೆ ಮುಖ್ಯಮಂತ್ರಿ ಮನವಿ</strong></p>.<p>ಖಾಸಗಿ ಆಸ್ಪತ್ರೆ ವೈದ್ಯರು ಆಸ್ಪತ್ರೆಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಇಳಿಯಬಾರದು. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.</p>.<p>‘ಖಾಸಗಿ ಆಸ್ಪತ್ರೆಗಳ ಮಾಲೀಕರೊಂದಿಗೆ ಈಗಾಗಲೇ ಒಂದು ಬಾರಿ ಚರ್ಚೆ ನಡೆಸಲಾಗಿದೆ. ಅವರ ಬೇಡಿಕೆಗಳಿಗೂ ಸರ್ಕಾರ ಸ್ಪಂದಿಸುತ್ತದೆ. ಇದೆಲ್ಲವೂ ಸದನದಲ್ಲಿ ನಿರ್ಧಾರ ಆಗಬೇಕಿದೆ’ ಎಂದು ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದರು.</p>.<p>ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಬಳಿಕ ಜಂಟಿ ಸದನ ಸಮಿತಿಗೆ ಒಪ್ಪಿಸಲಾಗಿತ್ತು. ಈ ಸಮಿತಿ ಅನೇಕ ಸಭೆಗಳನ್ನು ನಡೆಸಿ ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿದೆ. ಮಸೂದೆ ಪರಿಷ್ಕರಿಸಿ, ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.</p>.<p><strong>ಬಂದ್ನಿಂದ ಏನೆಲ್ಲ ವ್ಯತ್ಯಯ</strong></p>.<p>* ಔಷಧ ಅಂಗಡಿಗಳು ಇರುವುದಿಲ್ಲ</p>.<p>* ಕ್ಲಿನಿಕ್ಗಳು ಬಂದ್ ಆಗಲಿವೆ</p>.<p>* ರಕ್ತನಿಧಿಗಳು ಕಾರ್ಯನಿರ್ವಹಿಸುವುದಿಲ್ಲ</p>.<p>* ಖಾಸಗಿ ಆಸ್ಪತ್ರೆಗಳಲ್ಲಿ ಹೊರರೋಗಿಗಳ ತಪಾಸಣೆ ಇರುವುದಿಲ್ಲ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>