‘ಬಿಜೆಪಿ ಪರಿವರ್ತನಾ ಯಾತ್ರೆಗೆ ಸಂಪೂರ್ಣವಾಗಿ ಹಿನ್ನಡೆಯಾಗಿದೆ. ನೆಲಮಂಗಲ, ತುಮಕೂರಿನಲ್ಲಿನ ಖಾಲಿ ಖುರ್ಚಿಗಳೇ ಇದಕ್ಕೆ ಸಾಕ್ಷಿ. ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ವೇಳೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಅವರ ಸಚಿವ ಸಂಪುಟದಲ್ಲಿದ್ದ ಹಲವು ಸಚಿವರು ಜೈಲು ಸೇರಿದ್ದರು. ಅಂಥವರಿಂದ ಈ ರಾಜ್ಯವು ಪರಿವರ್ತನೆ ಬಯಸುವುದಿಲ್ಲ. ಜನರು ಕಾಂಗ್ರೆಸ್ ಪರವಾಗಿದ್ದಾರೆ. ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನೊಂದು ಬಜೆಟ್ ಮಂಡನೆ ಮಾಡಲಿದ್ದಾರೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ನ. 8ರಂದು ಕಾಂಗ್ರೆಸ್ ಕರಾಳ ದಿನ ಆಚರಣೆ ಮಾಡಲಿದೆ’ ಎಂದು ಅವರು ತಿಳಿಸಿದರು.