ಗೋಷ್ಠಿಗಳಲ್ಲಿ ಭಾಗವಹಿಸುವ ಗಣ್ಯರಿಗೆ ಐಷಾರಾಮಿ ಹೋಟೆಲ್ಗಳಲ್ಲಿ ವಸತಿ ಸೌಲಭ್ಯ ನೀಡಲಾಗುತ್ತದೆ. ಇದರಿಂದ ಕಸಾಪ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತದೆ. ಮನೆಗಳಲ್ಲಿ ತಂಗುವ ವ್ಯವಸ್ಥೆ ಕಲ್ಪಿಸಿದರೆ ಈ ಹೊರೆಯನ್ನು ತಪ್ಪಿಸಬಹದು ಎಂದು ಸಾಹಿತಿಗಳ ಮನೆಗಳಲ್ಲೇ ವಸತಿ ಸೌಲಭ್ಯ ಕಲ್ಪಿಸಲು ಸಂಘಟಕರು ನಿರ್ಧರಿಸಿದ್ದರು. ಆದರೆ, ಈವರೆಗೂ ಕೇವಲ 9 ಮಂದಿ ತಮ್ಮ ಮನೆಗಳಲ್ಲಿ ಅತಿಥಿಗಳನ್ನು ಉಳಿಸಿಕೊಳ್ಳಲು ಹೆಸರು ನೋಂದಾಯಿಸಿಕೊಂಡಿದ್ದಾರೆ.