<p><strong>ಮೈಸೂರು:</strong> ಮೈಸೂರಿನಲ್ಲಿ ನ. 24ರಿಂದ 26ರ ವರೆಗೆ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳಿಗೆ ವಸತಿ ಸೌಲಭ್ಯ ನೀಡಲು ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಮುಂದಾಗುತ್ತಿಲ್ಲ.</p>.<p>‘ಸಮ್ಮೇಳನದ ವಿವಿಧ ಗೋಷ್ಠಿಗಳಿಗೆ ವಿವಿಧೆಡೆಗಳಿಂದ ಬರುವ ಗಣ್ಯರಿಗೆ ಹೋಟೆಲ್, ಅತಿಥಿಗೃಹಗಳಲ್ಲಿ ವಸತಿ ಸೌಲಭ್ಯ ನೀಡುವುದರ ಬದಲಾಗಿ ಸಾಹಿತಿಗಳೇ ತಮ್ಮ ಮನೆಗಳಲ್ಲಿ ಅತಿಥಿಗಳನ್ನು ಉಳಿಸಿಕೊಳ್ಳುತ್ತಾರೆ’ ಎಂದು ಸಾಹಿತಿಗಳೇ ಸಮ್ಮೇಳನ ಆಯೋಜಕರಿಗೆ ಸಲಹೆ ನೀಡಿದ್ದರು.</p>.<p>ಗೋಷ್ಠಿಗಳಲ್ಲಿ ಭಾಗವಹಿಸುವ ಗಣ್ಯರಿಗೆ ಐಷಾರಾಮಿ ಹೋಟೆಲ್ಗಳಲ್ಲಿ ವಸತಿ ಸೌಲಭ್ಯ ನೀಡಲಾಗುತ್ತದೆ. ಇದರಿಂದ ಕಸಾಪ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತದೆ. ಮನೆಗಳಲ್ಲಿ ತಂಗುವ ವ್ಯವಸ್ಥೆ ಕಲ್ಪಿಸಿದರೆ ಈ ಹೊರೆಯನ್ನು ತಪ್ಪಿಸಬಹದು ಎಂದು ಸಾಹಿತಿಗಳ ಮನೆಗಳಲ್ಲೇ ವಸತಿ ಸೌಲಭ್ಯ ಕಲ್ಪಿಸಲು ಸಂಘಟಕರು ನಿರ್ಧರಿಸಿದ್ದರು. ಆದರೆ, ಈವರೆಗೂ ಕೇವಲ 9 ಮಂದಿ ತಮ್ಮ ಮನೆಗಳಲ್ಲಿ ಅತಿಥಿಗಳನ್ನು ಉಳಿಸಿಕೊಳ್ಳಲು ಹೆಸರು ನೋಂದಾಯಿಸಿಕೊಂಡಿದ್ದಾರೆ.</p>.<p><strong>ಊಟದ ವ್ಯವಸ್ಥೆ: </strong>‘ಅತಿಥಿಗಳನ್ನು ಮನೆಗಳಲ್ಲೇ ಉಳಿಸಿಕೊಂಡರೂ ಊಟದ ವ್ಯವಸ್ಥೆ ಮಾಡಬೇಕಿಲ್ಲ. ಸಮ್ಮೇಳನ ನಡೆಯುವ ಸ್ಥಳದಲ್ಲೇ ತಿಂಡಿ, ಊಟದ ವ್ಯವಸ್ಥೆ ಮಾಡಲಾಗುತ್ತದೆ. ಕೇವಲ ವಸತಿ ಸೌಲಭ್ಯ ನೀಡಿದರೆ ಸಾಕು ಎಂದರೂ ಸಾಹಿತಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು.</p>.<p>‘ಕನಿಷ್ಠ 50 ಮನೆಗಳು ಬೇಕಾಗಬಹುದು ಎಂದು ಅಂದಾಜಿಸಿದ್ದೆವು. ಮುಂದಿನ ದಿನಗಳಲ್ಲಿ ಸಾಹಿತಿಗಳು, ಸಾಹಿತ್ಯಾಸಕ್ತರು ಮುಂದಾಗದಿದ್ದರೆ ಪರ್ಯಾಯ ಮಾರ್ಗ ಹುಡುಕಲಾಗುವುದು. ಹೋಟೆಲ್ಗಳಲ್ಲೇ ವಸತಿ ಸೌಲಭ್ಯ ಕಲ್ಪಿಸಬೇಕಾಗುತ್ತದೆ’ ಎಂದು ಹೇಳಿದರು.</p>.<p>* ಅತಿಥಿ ಸತ್ಕಾರ ಮಾಡುವಂತೆ ಸಾಹಿತಿಗಳೇ ಸಲಹೆ ನೀಡಿದ್ದರು. ಈಗ ಅವರಿಂದಲೇ ಆಸಕ್ತಿ ವ್ಯಕ್ತವಾಗಿಲ್ಲ. ನೋಂದಣಿಯ ವೇಗ ಸಾಲದು</p>.<p><strong>–ಡಾ.ವೈ.ಡಿ.ರಾಜಣ್ಣ, ಅಧ್ಯಕ್ಷ,</strong> ಕಸಾಪ ಜಿಲ್ಲಾ ಘಟಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರಿನಲ್ಲಿ ನ. 24ರಿಂದ 26ರ ವರೆಗೆ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬರುವ ಅತಿಥಿಗಳಿಗೆ ವಸತಿ ಸೌಲಭ್ಯ ನೀಡಲು ಸಾಹಿತಿಗಳು ಹಾಗೂ ಸಾಹಿತ್ಯಾಸಕ್ತರು ಮುಂದಾಗುತ್ತಿಲ್ಲ.</p>.<p>‘ಸಮ್ಮೇಳನದ ವಿವಿಧ ಗೋಷ್ಠಿಗಳಿಗೆ ವಿವಿಧೆಡೆಗಳಿಂದ ಬರುವ ಗಣ್ಯರಿಗೆ ಹೋಟೆಲ್, ಅತಿಥಿಗೃಹಗಳಲ್ಲಿ ವಸತಿ ಸೌಲಭ್ಯ ನೀಡುವುದರ ಬದಲಾಗಿ ಸಾಹಿತಿಗಳೇ ತಮ್ಮ ಮನೆಗಳಲ್ಲಿ ಅತಿಥಿಗಳನ್ನು ಉಳಿಸಿಕೊಳ್ಳುತ್ತಾರೆ’ ಎಂದು ಸಾಹಿತಿಗಳೇ ಸಮ್ಮೇಳನ ಆಯೋಜಕರಿಗೆ ಸಲಹೆ ನೀಡಿದ್ದರು.</p>.<p>ಗೋಷ್ಠಿಗಳಲ್ಲಿ ಭಾಗವಹಿಸುವ ಗಣ್ಯರಿಗೆ ಐಷಾರಾಮಿ ಹೋಟೆಲ್ಗಳಲ್ಲಿ ವಸತಿ ಸೌಲಭ್ಯ ನೀಡಲಾಗುತ್ತದೆ. ಇದರಿಂದ ಕಸಾಪ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳುತ್ತದೆ. ಮನೆಗಳಲ್ಲಿ ತಂಗುವ ವ್ಯವಸ್ಥೆ ಕಲ್ಪಿಸಿದರೆ ಈ ಹೊರೆಯನ್ನು ತಪ್ಪಿಸಬಹದು ಎಂದು ಸಾಹಿತಿಗಳ ಮನೆಗಳಲ್ಲೇ ವಸತಿ ಸೌಲಭ್ಯ ಕಲ್ಪಿಸಲು ಸಂಘಟಕರು ನಿರ್ಧರಿಸಿದ್ದರು. ಆದರೆ, ಈವರೆಗೂ ಕೇವಲ 9 ಮಂದಿ ತಮ್ಮ ಮನೆಗಳಲ್ಲಿ ಅತಿಥಿಗಳನ್ನು ಉಳಿಸಿಕೊಳ್ಳಲು ಹೆಸರು ನೋಂದಾಯಿಸಿಕೊಂಡಿದ್ದಾರೆ.</p>.<p><strong>ಊಟದ ವ್ಯವಸ್ಥೆ: </strong>‘ಅತಿಥಿಗಳನ್ನು ಮನೆಗಳಲ್ಲೇ ಉಳಿಸಿಕೊಂಡರೂ ಊಟದ ವ್ಯವಸ್ಥೆ ಮಾಡಬೇಕಿಲ್ಲ. ಸಮ್ಮೇಳನ ನಡೆಯುವ ಸ್ಥಳದಲ್ಲೇ ತಿಂಡಿ, ಊಟದ ವ್ಯವಸ್ಥೆ ಮಾಡಲಾಗುತ್ತದೆ. ಕೇವಲ ವಸತಿ ಸೌಲಭ್ಯ ನೀಡಿದರೆ ಸಾಕು ಎಂದರೂ ಸಾಹಿತಿಗಳು ಹಿಂದೇಟು ಹಾಕುತ್ತಿದ್ದಾರೆ’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ತಿಳಿಸಿದರು.</p>.<p>‘ಕನಿಷ್ಠ 50 ಮನೆಗಳು ಬೇಕಾಗಬಹುದು ಎಂದು ಅಂದಾಜಿಸಿದ್ದೆವು. ಮುಂದಿನ ದಿನಗಳಲ್ಲಿ ಸಾಹಿತಿಗಳು, ಸಾಹಿತ್ಯಾಸಕ್ತರು ಮುಂದಾಗದಿದ್ದರೆ ಪರ್ಯಾಯ ಮಾರ್ಗ ಹುಡುಕಲಾಗುವುದು. ಹೋಟೆಲ್ಗಳಲ್ಲೇ ವಸತಿ ಸೌಲಭ್ಯ ಕಲ್ಪಿಸಬೇಕಾಗುತ್ತದೆ’ ಎಂದು ಹೇಳಿದರು.</p>.<p>* ಅತಿಥಿ ಸತ್ಕಾರ ಮಾಡುವಂತೆ ಸಾಹಿತಿಗಳೇ ಸಲಹೆ ನೀಡಿದ್ದರು. ಈಗ ಅವರಿಂದಲೇ ಆಸಕ್ತಿ ವ್ಯಕ್ತವಾಗಿಲ್ಲ. ನೋಂದಣಿಯ ವೇಗ ಸಾಲದು</p>.<p><strong>–ಡಾ.ವೈ.ಡಿ.ರಾಜಣ್ಣ, ಅಧ್ಯಕ್ಷ,</strong> ಕಸಾಪ ಜಿಲ್ಲಾ ಘಟಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>