<p><strong>ಬೆಂಗಳೂರು: </strong>ಸುದ್ದಗುಂಟೆಪಾಳ್ಯ ವಾರ್ಡ್ನಲ್ಲಿ ‘ನಮ್ಮ ಬೆಂಗಳೂರು – ಸ್ವಚ್ಛ ಬೆಂಗಳೂರು’ ಸಂಸ್ಥೆ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನಕ್ಕೆ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ನಗರವನ್ನು ಶುಚಿಯಾಗಿಡುವುದು ಕೇವಲ ಪೌರಕಾರ್ಮಿಕರ ಕೆಲಸವಲ್ಲ. ಇಲ್ಲಿ ನೆಲೆಸಿರುವ ಪ್ರತಿಯೊಬ್ಬರ ಜವಾಬ್ದಾರಿ’ ಎಂದರು.</p>.<p>‘ಒಣ ಕಸ, ಹಸಿ ಕಸವನ್ನು ಮನೆಗಳಲ್ಲಿಯೇ ಬೇರ್ಪಡಿಸಿದಾಗ, ನಿರ್ವಹಣೆ ಸುಲಭವಾಗುತ್ತದೆ. ಶಾಲಾ ಮಕ್ಕಳು ಅಪ್ಪ–ಅಮ್ಮಂದಿರಿಗೆ ಕಸ ಬೇರ್ಪಡಿಸುವ ಬಗ್ಗೆ ತಿಳಿವಳಿಕೆ ನೀಡಬೇಕು. ನಗರದೆಲ್ಲೆಡೆ ಬಿಬಿಎಂಪಿ ವತಿಯಿಂದಲೂ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಇದಕ್ಕೆ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ವಚ್ಚತಾ ಘೋಷಣೆಗಳ ಭಿತ್ತಿಫಲಕಗಳನ್ನು ಹಿಡಿದು, ಮನೆ ಮನೆಗೆ ತೆರಳಿ ಜನರದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.</p>.<p>ಅಭಿಯಾನದಲ್ಲಿ ಪಾಲಿಕೆ ಸದಸ್ಯರಾದ ಜಿ.ಮಂಜುನಾಥ್, ಮಂಜುನಾಥ್ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಕೆಪಿಸಿಸಿ ಮಹಿಳಾ ಘಟಕದ ಮುಖ್ಯಸ್ಥೆ ಸೌಮ್ಯರೆಡ್ಡಿ, ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದರು. ಪೌರ ಕಾರ್ಮಿಕರಿಗೆ ಕೈಗವಚ, ಮುಖಗವಸುಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸುದ್ದಗುಂಟೆಪಾಳ್ಯ ವಾರ್ಡ್ನಲ್ಲಿ ‘ನಮ್ಮ ಬೆಂಗಳೂರು – ಸ್ವಚ್ಛ ಬೆಂಗಳೂರು’ ಸಂಸ್ಥೆ ಶನಿವಾರ ಹಮ್ಮಿಕೊಂಡಿದ್ದ ಜಾಗೃತಿ ಅಭಿಯಾನಕ್ಕೆ ಗೃಹ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.</p>.<p>ನಂತರ ಮಾತನಾಡಿದ ಅವರು, ‘ನಗರವನ್ನು ಶುಚಿಯಾಗಿಡುವುದು ಕೇವಲ ಪೌರಕಾರ್ಮಿಕರ ಕೆಲಸವಲ್ಲ. ಇಲ್ಲಿ ನೆಲೆಸಿರುವ ಪ್ರತಿಯೊಬ್ಬರ ಜವಾಬ್ದಾರಿ’ ಎಂದರು.</p>.<p>‘ಒಣ ಕಸ, ಹಸಿ ಕಸವನ್ನು ಮನೆಗಳಲ್ಲಿಯೇ ಬೇರ್ಪಡಿಸಿದಾಗ, ನಿರ್ವಹಣೆ ಸುಲಭವಾಗುತ್ತದೆ. ಶಾಲಾ ಮಕ್ಕಳು ಅಪ್ಪ–ಅಮ್ಮಂದಿರಿಗೆ ಕಸ ಬೇರ್ಪಡಿಸುವ ಬಗ್ಗೆ ತಿಳಿವಳಿಕೆ ನೀಡಬೇಕು. ನಗರದೆಲ್ಲೆಡೆ ಬಿಬಿಎಂಪಿ ವತಿಯಿಂದಲೂ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ನಾಗರಿಕರು ಇದಕ್ಕೆ ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ವಿವಿಧ ಶಾಲೆಗಳ ವಿದ್ಯಾರ್ಥಿಗಳು ಸ್ವಚ್ಚತಾ ಘೋಷಣೆಗಳ ಭಿತ್ತಿಫಲಕಗಳನ್ನು ಹಿಡಿದು, ಮನೆ ಮನೆಗೆ ತೆರಳಿ ಜನರದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.</p>.<p>ಅಭಿಯಾನದಲ್ಲಿ ಪಾಲಿಕೆ ಸದಸ್ಯರಾದ ಜಿ.ಮಂಜುನಾಥ್, ಮಂಜುನಾಥ್ ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್, ಕೆಪಿಸಿಸಿ ಮಹಿಳಾ ಘಟಕದ ಮುಖ್ಯಸ್ಥೆ ಸೌಮ್ಯರೆಡ್ಡಿ, ವಿದ್ಯಾರ್ಥಿಗಳ ಜತೆ ಹೆಜ್ಜೆ ಹಾಕಿದರು. ಪೌರ ಕಾರ್ಮಿಕರಿಗೆ ಕೈಗವಚ, ಮುಖಗವಸುಗಳನ್ನು ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>