ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದಾಗಿ ಭವಿಷ್ಯ ಹೇಳಿದ್ದೆ. ಆಗ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಪ್ರಚಾರ ಕಾರ್ಯ ಆರಂಭವಾಗಿತ್ತು. ನಂತರ ಅವರು ಮುಖ್ಯಮಂತ್ರಿಯಾದರು. ಈಗಲೂ ಈ ಕ್ಷೇತ್ರದಿಂದಲೇ ಪ್ರಚಾರ ಕಾರ್ಯಕ್ರಮ ಆರಂಭಗೊಳ್ಳುತ್ತಿದೆ. ಜೆಡಿಎಸ್
ಹೆಚ್ಚಿನ ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರುವುದು ನಿಶ್ಚಿತ. ಅಂತೆಯೇ, ಕುಮಾರಸ್ವಾಮಿಯೇ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಅವರು ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.
ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರ ಸ್ವಾಮಿ, ಮುಖಂಡರಾದ ಬಸವರಾಜ ಹೊರಟ್ಟಿ, ಬಂಡೆಪ್ಪ ಕಾಶಂಪುರ , ಮಧು ಬಂಗಾರಪ್ಪ ಸೇರಿದಂತೆ ರಾಜ್ಯಮಟ್ಟದ ಹಲ ವಾರು ಮುಖಂಡರು ಈ ಶಕ್ತಿ ಪ್ರದರ್ಶನದಲ್ಲಿ ಭಾಗವಹಿಸುತ್ತಾರೆ. ಇದಕ್ಕೂ ಮುನ್ನ ಚಾಮುಂಡೇಶ್ವರಿ ಕ್ಷೇತ್ರದ ಹಲವು ಭಾಗಗಳಲ್ಲಿ ‘ಕರ್ನಾಟಕ ವಿಕಾಸ ರಥ’ ಮೆರವಣಿಗೆ ನಡೆಯಲಿದೆ ಎಂದು ದೇವೆಗೌಡ ಮಾಹಿತಿ ನೀಡಿದರು.