ಬಿಬಿಎಂಪಿ ವಿಶೇಷ ಆಯುಕ್ತ ಮನೋಜ್ ರಾಜನ್ ಅವರು ಆಂಧ್ರದ ನಿಯೋಗಕ್ಕೆ ಇಂದಿರಾ ಕ್ಯಾಂಟೀನ್, ಅಡುಗೆ ಮನೆಗಳು, ಆಹಾರ ತಯಾರಿಕೆಗೆ ಬೇಕಾದ ಪರಿಕರಗಳು ಮತ್ತು ಆಹಾರ ಪೂರೈಕೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದರು. ಅಲ್ಲದೆ, ಕೆಲವು ಕ್ಯಾಂಟೀನ್ಗಳಿಗೂ ಭೇಟಿ ನೀಡಿ ಅಲ್ಲಿನ ಸ್ವಚ್ಛತೆ, ಸಿಬ್ಬಂದಿ ಸಮವಸ್ತ್ರ, ಆಹಾರ ವಿತರಣೆ, ಕುಡಿಯುವ ನೀರಿನ ಸೌಲಭ್ಯದ ಬಗ್ಗೆಯೂ ಮಾಹಿತಿ ಪಡೆದರು.