ಗುಂಡೇಟಿನ ಗಾಯದ ಚಿಕಿತ್ಸೆಯಲ್ಲಿದ್ದ ಸಂತೋಷ್ಕುಮಾರ್, ಇತ್ತೀಚೆಗಷ್ಟೇ ಕರ್ತವ್ಯಕ್ಕೆ ಮರಳಿದ್ದರು. ಕುಟುಂಬದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಭಾನುವಾರ ರಜೆ ಮೇಲೆ ಊರಿಗೆ ಬಂದಿದ್ದರು. ರಾತ್ರಿ ವಿಷಪೂರಿತ ಹಾವೊಂದು ಅವರಿಗೆ ಕಚ್ಚಿದೆ. ಚಿಕಿತ್ಸೆಗಾಗಿ ಇಲ್ಲಿನ ಕಂಕನಾಡಿಯ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.