<p><strong>ಲಖನೌ: </strong>ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ಷೇತ್ರ ಗೋರಖಪುರದ ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಸಾವಿನ ಸರಣಿ ಮತ್ತೆ ಮುಂದುವರಿದಿದೆ.</p>.<p>ನಾಲ್ಕು ದಿನಗಳಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿನ(ಎನ್ಐಸಿಯು) 29 ಮಕ್ಕಳು ಸೇರಿದಂತೆ 55 ಮಕ್ಕಳು ಮೃತಪಟ್ಟಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಮಕ್ಕಳು ಮೆದುಳಿನ ಉರಿಯೂತ(ಎನ್ಸೆಫಾಲಿಟಿಸ್) ಮತ್ತು ಇತರ ರೋಗಗಳಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಮೂಲಗಳ ಪ್ರಕಾರ, ನ. 1ರಿಂದ 3ರವರೆಗೆ ಎನ್ಐಸಿಯುಗೆ 65 ಮಕ್ಕಳನ್ನು ದಾಖಲಿಸಲಾಗಿತ್ತು. ಅದರಲ್ಲಿ 22 ಮಕ್ಕಳು ಮೃತಪಟ್ಟಿದ್ದಾರೆ. ಇದೇ ವೇಳೆ ಮಕ್ಕಳ ಐಸಿಯು ವಿಭಾಗಕ್ಕೆ 178 ಮಕ್ಕಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದರಲ್ಲಿ 21 ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಸಕ್ತ ವರ್ಷ ಜನವರಿಯಿಂದ ಈ ವರೆಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸುಮಾರು 1,900 ಮಕ್ಕಳು ವಿವಿಧ ವೈದ್ಯಕೀಯ ಕಾರಣಗಳಿಂದ ಮೃತಪಟ್ಟಿದ್ದಾರೆ ಅದರಲ್ಲಿ ಹೆಚ್ಚಾಗಿ ಮೆದುಳು ಉರಿಯೂತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ಷೇತ್ರ ಗೋರಖಪುರದ ಬಿಆರ್ಡಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಸಾವಿನ ಸರಣಿ ಮತ್ತೆ ಮುಂದುವರಿದಿದೆ.</p>.<p>ನಾಲ್ಕು ದಿನಗಳಲ್ಲಿ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿನ(ಎನ್ಐಸಿಯು) 29 ಮಕ್ಕಳು ಸೇರಿದಂತೆ 55 ಮಕ್ಕಳು ಮೃತಪಟ್ಟಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.</p>.<p>ಮಕ್ಕಳು ಮೆದುಳಿನ ಉರಿಯೂತ(ಎನ್ಸೆಫಾಲಿಟಿಸ್) ಮತ್ತು ಇತರ ರೋಗಗಳಿಂದ ಮೃತಪಟ್ಟಿದ್ದಾರೆ ಎಂದು ಮೂಲಗಳು ಹೇಳಿವೆ.</p>.<p>ಮೂಲಗಳ ಪ್ರಕಾರ, ನ. 1ರಿಂದ 3ರವರೆಗೆ ಎನ್ಐಸಿಯುಗೆ 65 ಮಕ್ಕಳನ್ನು ದಾಖಲಿಸಲಾಗಿತ್ತು. ಅದರಲ್ಲಿ 22 ಮಕ್ಕಳು ಮೃತಪಟ್ಟಿದ್ದಾರೆ. ಇದೇ ವೇಳೆ ಮಕ್ಕಳ ಐಸಿಯು ವಿಭಾಗಕ್ಕೆ 178 ಮಕ್ಕಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇದರಲ್ಲಿ 21 ಮಕ್ಕಳು ಸಾವಿಗೀಡಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಸಕ್ತ ವರ್ಷ ಜನವರಿಯಿಂದ ಈ ವರೆಗೆ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸುಮಾರು 1,900 ಮಕ್ಕಳು ವಿವಿಧ ವೈದ್ಯಕೀಯ ಕಾರಣಗಳಿಂದ ಮೃತಪಟ್ಟಿದ್ದಾರೆ ಅದರಲ್ಲಿ ಹೆಚ್ಚಾಗಿ ಮೆದುಳು ಉರಿಯೂತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>