ನಾಪೋಕ್ಲು, ಭಾಗಮಂಡಲ, ತಲಕಾವೇರಿ, ಸಿದ್ದಾಪುರ, ನೆಲ್ಯಹುದಿಕೇರಿ, ಚೆಟ್ಟಳ್ಳಿ, ಸುಂಟಿಕೊಪ್ಪ ವ್ಯಾಪ್ತಿಯಲ್ಲೂ ಮಳೆ ಸುರಿದಿದೆ. ಜಿಲ್ಲೆಯ ಕೆಲವು ಕಡೆ ಕಾಫಿ ಕೊಯ್ಲು ಆರಂಭವಾಗಿದ್ದು ಮಳೆ ಅಡ್ಡಿಪಡಿಸಿತು. ಇದೇ ರೀತಿ ಮಳೆ ಮುಂದುವರಿದರೆ ಕಾಫಿ ಹಣ್ಣು ಉದುರಿ ನಷ್ಟ ಉಂಟಾಗಲಿದೆ ಎಂದು ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.