<p><strong>ಅಹಮದಾಬಾದ್: </strong>ಅಭಿವೃದ್ಧಿಯ ಸಂದೇಶವನ್ನು ಮನೆ ಮನೆಗೆ ತಲುಪಿಸುವುದಕ್ಕಾಗಿ ‘ಗುಜರಾತ್ ಗೌರವ ಮಹಾ ಸಂಪರ್ಕ ಅಭಿಯಾನ’ ಎಂಬ ಆರು ದಿನಗಳ ಕಾರ್ಯಕ್ರಮಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮಂಗಳವಾರ ಚಾಲನೆ ನೀಡಿದ್ದಾರೆ.</p>.<p>ರಾಜ್ಯದ 50 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳ ಮತದಾರರನ್ನು ನೇರವಾಗಿ ಸಂಪರ್ಕಿಸುವುದು ಈ ಅಭಿಯಾನದ ಉದ್ದೇಶ. ಷಾ ಅವರು ಹಿಂದೆ ಪ್ರತಿನಿಧಿಸಿದ್ದ ನರನ್ಪುರ ವಿಧಾನಸಭಾ ಕ್ಷೇತ್ರದಿಂದ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನದ ಭಾಗವಾಗಿ ಷಾ ಅವರು ಹತ್ತು ನಿವಾಸಿ ಸಂಘಗಳ ಸದಸ್ಯರನ್ನು ಭೇಟಿಯಾದರು.</p>.<p>ಭಾರಿ ಸಂಖ್ಯೆಯ ಕಾರ್ಯಕರ್ತರ ಜತೆಗೆ ಷಾ ಅವರು ಕೆಲವು ಮನೆಗಳಿಗೆ ಹೋಗಿ ಮತ ಯಾಚಿಸಿದರು. 1998 ರಿಂದ ಇತ್ತೀಚಿನವರೆಗೆ ಈ ಕ್ಷೇತ್ರವನ್ನು ಷಾ ಅವರು ಪ್ರತಿನಿಧಿಸಿದ್ದರು. ಕೆಲವು ತಿಂಗಳ ಹಿಂದೆ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಬರೆದ ಪತ್ರವೊಂದರ ಪ್ರತಿಗಳನ್ನು ಮನೆ ಮನೆಗೆ ವಿತರಿಸಲಾಯಿತು. ಮುಖ್ಯಮಂತ್ರಿ ವಿಜಯ ರೂಪಾಣಿ, ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಮುಂತಾದ ನಾಯಕರು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. </p>.<p>ಗುಜರಾತಿನಲ್ಲಿ ಡಿ. 9 ಮತ್ತು 14ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿ. 18ರಂದು ಮತ ಎಣಿಕೆ ನಡೆಸಲಾಗುವುದು.</p>.<p>ಡಿ.14ರ ಸಂಜೆವರೆಗೆ ಮತದಾನೋತ್ತರ ಸಮೀಕ್ಷೆಗೆ ಅವಕಾಶವಿಲ್ಲ: ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟಣೆಗೆ ಡಿಸೆಂಬರ್ 14ರ ಸಂಜೆವರೆಗೂ ಅವಕಾಶವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.</p>.<p>ಡಿ. 9ಕ್ಕೆ ಹಿಮಾಚಲ ಪ್ರದೇಶದಲ್ಲಿ ಮತದಾನ ಮುಕ್ತಾಯವಾದರೂ ಡಿ. 14ರಂದು ಗುಜರಾತ್ನಲ್ಲಿ ಎರಡನೇ ಹಂತದ ಮತದಾನ ಮುಗಿಯುವವರೆಗೆ ಸಮೀಕ್ಷೆ ಬಹಿರಂಗಪಡಿಸುವಂತಿಲ್ಲ ಎಂದು ಆಯೋಗ ಸ್ಪಷ್ಟ ಸೂಚನೆ ನೀಡಿದೆ. ಪತ್ರಿಕೆ, ಟಿ.ವಿ, ರೇಡಿಯೊ ಅಥವಾ ಅಂತರ್ಜಾಲ ಮಾಧ್ಯಮಗಳು ನಿಯಮ ಉಲ್ಲಂಘಿಸುವಂತಿಲ್ಲ ಎಂದು ತಿಳಿಸಿದೆ.</p>.<p>***</p>.<p><strong>ಹಿಮಾಚಲ: ಬಹಿರಂಗ ಪ್ರಚಾರ ಅಂತ್ಯ<br /> ಶಿಮ್ಲಾ:</strong> ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಮಂಗಳವಾರ ಕೊನೆಗೊಂಡಿದೆ. 9ರಂದು ಮತದಾನ ನಡೆಯಲಿದೆ.</p>.<p>ಉಳಿದ ದಿನಗಳಲ್ಲಿ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬಾರಿಯ ಪ್ರಚಾರದ ವ್ಯಾಪ್ತಿ ಮತ್ತು ಅಬ್ಬರದಲ್ಲಿ ಕಾಂಗ್ರೆಸ್ಗಿಂತ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸಿತ್ತು.</p>.<p>ಈ ಬಾರಿ ಪಕ್ಷಗಳಿಗೆ ಪ್ರಚಾರ ಮಾಡಲು ಸಿಕ್ಕಿದ್ದು 12 ದಿನಗಳು ಮಾತ್ರ. ಇದು ಇತ್ತೀಚಿನ ಚುನಾವಣೆಗಳಲ್ಲಿಯೇ ಅತ್ಯಂತ ಅಲ್ಪಾವಧಿಯ ಚುನಾವಣಾ ಪ್ರಚಾರ. ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಮತ ಎಣಿಕೆ ಡಿಸೆಂಬರ್ 18ರಂದು ನಡೆಯಲಿದೆ.</p>.<p>ವಿಧಾನಸಭೆಯ ಒಟ್ಟು ಸದಸ್ಯ ಬಲ 68 ಆಗಿದ್ದು, ಕಾಂಗ್ರೆಸ್ 36 ಶಾಸಕರನ್ನು ಹೊಂದಿದೆ. ಬಿಜೆಪಿ ಸದಸ್ಯರ ಸಂಖ್ಯೆ 26. ಉಳಿದವರು ಪಕ್ಷೇತರರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್: </strong>ಅಭಿವೃದ್ಧಿಯ ಸಂದೇಶವನ್ನು ಮನೆ ಮನೆಗೆ ತಲುಪಿಸುವುದಕ್ಕಾಗಿ ‘ಗುಜರಾತ್ ಗೌರವ ಮಹಾ ಸಂಪರ್ಕ ಅಭಿಯಾನ’ ಎಂಬ ಆರು ದಿನಗಳ ಕಾರ್ಯಕ್ರಮಕ್ಕೆ ಬಿಜೆಪಿ ಅಧ್ಯಕ್ಷ ಅಮಿತ್ ಷಾ ಮಂಗಳವಾರ ಚಾಲನೆ ನೀಡಿದ್ದಾರೆ.</p>.<p>ರಾಜ್ಯದ 50 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳ ಮತದಾರರನ್ನು ನೇರವಾಗಿ ಸಂಪರ್ಕಿಸುವುದು ಈ ಅಭಿಯಾನದ ಉದ್ದೇಶ. ಷಾ ಅವರು ಹಿಂದೆ ಪ್ರತಿನಿಧಿಸಿದ್ದ ನರನ್ಪುರ ವಿಧಾನಸಭಾ ಕ್ಷೇತ್ರದಿಂದ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನದ ಭಾಗವಾಗಿ ಷಾ ಅವರು ಹತ್ತು ನಿವಾಸಿ ಸಂಘಗಳ ಸದಸ್ಯರನ್ನು ಭೇಟಿಯಾದರು.</p>.<p>ಭಾರಿ ಸಂಖ್ಯೆಯ ಕಾರ್ಯಕರ್ತರ ಜತೆಗೆ ಷಾ ಅವರು ಕೆಲವು ಮನೆಗಳಿಗೆ ಹೋಗಿ ಮತ ಯಾಚಿಸಿದರು. 1998 ರಿಂದ ಇತ್ತೀಚಿನವರೆಗೆ ಈ ಕ್ಷೇತ್ರವನ್ನು ಷಾ ಅವರು ಪ್ರತಿನಿಧಿಸಿದ್ದರು. ಕೆಲವು ತಿಂಗಳ ಹಿಂದೆ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.</p>.<p>ಪ್ರಧಾನಿ ನರೇಂದ್ರ ಮೋದಿ ಅವರು ಬರೆದ ಪತ್ರವೊಂದರ ಪ್ರತಿಗಳನ್ನು ಮನೆ ಮನೆಗೆ ವಿತರಿಸಲಾಯಿತು. ಮುಖ್ಯಮಂತ್ರಿ ವಿಜಯ ರೂಪಾಣಿ, ಮಾಜಿ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಮುಂತಾದ ನಾಯಕರು ಬೇರೆ ಬೇರೆ ಕ್ಷೇತ್ರಗಳಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು. </p>.<p>ಗುಜರಾತಿನಲ್ಲಿ ಡಿ. 9 ಮತ್ತು 14ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಡಿ. 18ರಂದು ಮತ ಎಣಿಕೆ ನಡೆಸಲಾಗುವುದು.</p>.<p>ಡಿ.14ರ ಸಂಜೆವರೆಗೆ ಮತದಾನೋತ್ತರ ಸಮೀಕ್ಷೆಗೆ ಅವಕಾಶವಿಲ್ಲ: ಹಿಮಾಚಲ ಪ್ರದೇಶ ಹಾಗೂ ಗುಜರಾತ್ ವಿಧಾನಸಭೆ ಚುನಾವಣೆಯ ಮತದಾನೋತ್ತರ ಸಮೀಕ್ಷೆ ಪ್ರಕಟಣೆಗೆ ಡಿಸೆಂಬರ್ 14ರ ಸಂಜೆವರೆಗೂ ಅವಕಾಶವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.</p>.<p>ಡಿ. 9ಕ್ಕೆ ಹಿಮಾಚಲ ಪ್ರದೇಶದಲ್ಲಿ ಮತದಾನ ಮುಕ್ತಾಯವಾದರೂ ಡಿ. 14ರಂದು ಗುಜರಾತ್ನಲ್ಲಿ ಎರಡನೇ ಹಂತದ ಮತದಾನ ಮುಗಿಯುವವರೆಗೆ ಸಮೀಕ್ಷೆ ಬಹಿರಂಗಪಡಿಸುವಂತಿಲ್ಲ ಎಂದು ಆಯೋಗ ಸ್ಪಷ್ಟ ಸೂಚನೆ ನೀಡಿದೆ. ಪತ್ರಿಕೆ, ಟಿ.ವಿ, ರೇಡಿಯೊ ಅಥವಾ ಅಂತರ್ಜಾಲ ಮಾಧ್ಯಮಗಳು ನಿಯಮ ಉಲ್ಲಂಘಿಸುವಂತಿಲ್ಲ ಎಂದು ತಿಳಿಸಿದೆ.</p>.<p>***</p>.<p><strong>ಹಿಮಾಚಲ: ಬಹಿರಂಗ ಪ್ರಚಾರ ಅಂತ್ಯ<br /> ಶಿಮ್ಲಾ:</strong> ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಬಹಿರಂಗ ಪ್ರಚಾರ ಮಂಗಳವಾರ ಕೊನೆಗೊಂಡಿದೆ. 9ರಂದು ಮತದಾನ ನಡೆಯಲಿದೆ.</p>.<p>ಉಳಿದ ದಿನಗಳಲ್ಲಿ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಬಾರಿಯ ಪ್ರಚಾರದ ವ್ಯಾಪ್ತಿ ಮತ್ತು ಅಬ್ಬರದಲ್ಲಿ ಕಾಂಗ್ರೆಸ್ಗಿಂತ ಬಿಜೆಪಿ ಸ್ಪಷ್ಟ ಮೇಲುಗೈ ಸಾಧಿಸಿತ್ತು.</p>.<p>ಈ ಬಾರಿ ಪಕ್ಷಗಳಿಗೆ ಪ್ರಚಾರ ಮಾಡಲು ಸಿಕ್ಕಿದ್ದು 12 ದಿನಗಳು ಮಾತ್ರ. ಇದು ಇತ್ತೀಚಿನ ಚುನಾವಣೆಗಳಲ್ಲಿಯೇ ಅತ್ಯಂತ ಅಲ್ಪಾವಧಿಯ ಚುನಾವಣಾ ಪ್ರಚಾರ. ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಮತ ಎಣಿಕೆ ಡಿಸೆಂಬರ್ 18ರಂದು ನಡೆಯಲಿದೆ.</p>.<p>ವಿಧಾನಸಭೆಯ ಒಟ್ಟು ಸದಸ್ಯ ಬಲ 68 ಆಗಿದ್ದು, ಕಾಂಗ್ರೆಸ್ 36 ಶಾಸಕರನ್ನು ಹೊಂದಿದೆ. ಬಿಜೆಪಿ ಸದಸ್ಯರ ಸಂಖ್ಯೆ 26. ಉಳಿದವರು ಪಕ್ಷೇತರರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>