<p><strong>ಬರೇಲಿ, ಉತ್ತರ ಪ್ರದೇಶ:</strong> ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಬರೇಲಿಯಲ್ಲಿರುವ ತಮ್ಮ ಮನೆಯನ್ನು ಖಾಲಿ ಮಾಡಿ 17 ವರ್ಷಗಳಾದರೂ ಇಲ್ಲಿಯ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇರುವುದು ಈಗ ಬೆಳಕಿಗೆ ಬಂದಿದೆ.</p>.<p>2000ನೇ ಸಾಲಿನಲ್ಲಿ ಪ್ರಿಯಾಂಕಾ ಅವರು ‘ಭುವನ ಸುಂದರಿ’ ಯಾಗಿ ಆಯ್ಕೆಯಾದ ನಂತರ ಅವರ ಕುಟುಂಬ ಬರೇಲಿಯನ್ನು ಬಿಟ್ಟು ಮುಂಬೈಗೆ ಬಂದು ನೆಲೆಸಿದೆ. ಬರುವ ಸಂದರ್ಭದಲ್ಲಿ ಅವರ ತಂದೆ ಕರ್ನಲ್ ಅಶೋಕ್ ಚೋಪ್ರಾ ಅವರು ಈ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಕೂಡ ಕೊಟ್ಟು ಬಂದಿದ್ದರು. ಆದರೆ ಇದುವರೆಗೆ ಪ್ರಿಯಾಂಕಾ ಹಾಗೂ ಅವರ ತಾಯಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪ್ರತಿ ಚುನಾವಣೆ ಸಂದರ್ಭದಲ್ಲಿ ಮತದಾರರ ಮನೆಯ ಸಮೀಕ್ಷೆ ನಡೆಸಲಾಗುತ್ತದೆ. ಚೋಪ್ರಾ ಅವರ ಮನೆ ಬಹಳ ವರ್ಷಗಳಿಂದ ಬೀಗ ಹಾಕಿದ್ದರೂ ಆ ಬಗ್ಗೆ ಸಂಬಂಧಿಸಿದವರು ಗಮನಿಸದೇ ಇರುವುದು ಲೋಪ. ಆದ್ದರಿಂದ ಈ ಬಗ್ಗೆ ಸ್ಥಳೀಯ ಅಧಿಕಾರಿಗಳ ವಿವರಣೆ ಕೇಳಲಾಗಿದೆ, ವಿಚಾರಣೆ ನಡೆಯುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಅಭಿಜಿತ್ ಮುಖರ್ಜಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬರೇಲಿ, ಉತ್ತರ ಪ್ರದೇಶ:</strong> ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಬರೇಲಿಯಲ್ಲಿರುವ ತಮ್ಮ ಮನೆಯನ್ನು ಖಾಲಿ ಮಾಡಿ 17 ವರ್ಷಗಳಾದರೂ ಇಲ್ಲಿಯ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಇರುವುದು ಈಗ ಬೆಳಕಿಗೆ ಬಂದಿದೆ.</p>.<p>2000ನೇ ಸಾಲಿನಲ್ಲಿ ಪ್ರಿಯಾಂಕಾ ಅವರು ‘ಭುವನ ಸುಂದರಿ’ ಯಾಗಿ ಆಯ್ಕೆಯಾದ ನಂತರ ಅವರ ಕುಟುಂಬ ಬರೇಲಿಯನ್ನು ಬಿಟ್ಟು ಮುಂಬೈಗೆ ಬಂದು ನೆಲೆಸಿದೆ. ಬರುವ ಸಂದರ್ಭದಲ್ಲಿ ಅವರ ತಂದೆ ಕರ್ನಲ್ ಅಶೋಕ್ ಚೋಪ್ರಾ ಅವರು ಈ ಬಗ್ಗೆ ಸಂಬಂಧಿತ ಅಧಿಕಾರಿಗಳಿಗೆ ಪತ್ರ ಕೂಡ ಕೊಟ್ಟು ಬಂದಿದ್ದರು. ಆದರೆ ಇದುವರೆಗೆ ಪ್ರಿಯಾಂಕಾ ಹಾಗೂ ಅವರ ತಾಯಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಪ್ರತಿ ಚುನಾವಣೆ ಸಂದರ್ಭದಲ್ಲಿ ಮತದಾರರ ಮನೆಯ ಸಮೀಕ್ಷೆ ನಡೆಸಲಾಗುತ್ತದೆ. ಚೋಪ್ರಾ ಅವರ ಮನೆ ಬಹಳ ವರ್ಷಗಳಿಂದ ಬೀಗ ಹಾಕಿದ್ದರೂ ಆ ಬಗ್ಗೆ ಸಂಬಂಧಿಸಿದವರು ಗಮನಿಸದೇ ಇರುವುದು ಲೋಪ. ಆದ್ದರಿಂದ ಈ ಬಗ್ಗೆ ಸ್ಥಳೀಯ ಅಧಿಕಾರಿಗಳ ವಿವರಣೆ ಕೇಳಲಾಗಿದೆ, ವಿಚಾರಣೆ ನಡೆಯುತ್ತಿದೆ’ ಎಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಅಭಿಜಿತ್ ಮುಖರ್ಜಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>