<p><strong>ಚೆನ್ನೈ</strong>: ಚೆನ್ನೈನಲ್ಲಿರುವ ಜಯಾ ಟಿವಿ ಕಚೇರಿ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಕೊಡನಾಡು ಎಸ್ಟೇಟ್, ಎಐಎಡಿಎಂಕೆ ನೇತಾರೆ ವಿ.ಕೆ ಶಶಿಕಲಾ ಅವಕ ಕುಟುಂಬ ಮತ್ತು ಬೆಂಬಲಿಗರಿಗೆ ಸೇರಿದ ಆಸ್ತಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.<p>ತೆರಿಗೆ ವಂಚನೆ ಮತ್ತು ಅಕ್ರಮ ಹಣ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.</p>.<p>ಎಐಎಡಿಎಂಕೆ ಮುಖವಾಣಿ ನಮಧು ಎಂಜಿಆರ್, ಜಯಾ ಟಿವಿ, ಜಾಸ್ ಸಿನಿಮಾಸ್ ಸೇರಿದಂತೆ ಶಶಿಕಲಾ ಅವರ ಅಳಿಯ ಟಿಟಿವಿ ದಿನಕರನ್ ಅವರ ಆಸ್ತಿ ಮೇಲೂ ದಾಳಿ ನಡೆದಿದೆ.</p>.<p>ಬೆಳಗ್ಗೆ 6 ಗಂಟೆಗೆ ಚೆನ್ನೈ , ತಮಿಳುನಾಡಿನ ಪ್ರಮುಖ ನಗರಗಳು ಸೇರಿದಂತೆ ಬೆಂಗಳೂರು, ಪುದುಚ್ಚೇರಿ, ಹೈದರಾಬಾದ್, ದೆಹಲಿಯಲ್ಲಿ ಏಕಕಾಲಕ್ಕೆ ಈ ದಾಳಿ ಆರಂಭವಾಗಿದೆ.</p>.<p>ನಕಲಿ ಕಂಪೆನಿ, ಅಪ್ರಾಮಾಣಿಕ ಹೂಡಿಕೆ ಮತ್ತು ನಕಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಎಂಬ ಸಂದೇಹವಿರುವುದರಿಂದ ದಾಳಿ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ಮಿದಾಸ್ ಡಿಸ್ಟೆಲರೀಸ್ ಮತ್ತು ಶೌಖಾರ್ ಪೇಟೆಯಲ್ಲಿರುವ ಚಿನ್ನದ ವ್ಯಾಪಾರ ಕೇಂದ್ರಗಳ ಮೇಲೂ ಐಟಿ ಕಣ್ಣಿಟ್ಟಿದೆ.</p>.<p>ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಾಗ ನಮಧು ಎಂಜಿಆರ್, ಜಯಾ ಟಿವಿ ಕಚೇರಿಯಲ್ಲಿದ್ದ ನೌಕರರ ಮೊಬೈಲ್ ಫೋನ್ಗಳನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.</p>.<p>ಆಡ್ಯದಲ್ಲಿರುವ ದಿನಕರನ್ ಅವರ ನಿವಾಸ, ಶಶಿಕಲಾ ಅವರ ಪತಿ ನಟರಾಜನ್ ಅವರ ತಂಜಾವೂರಿನಲ್ಲಿರುವ ನಿವಾಸ ಮತ್ತು ಮನ್ನಾರ್ ಗುಡಿ ನಗರದಲ್ಲಿರುವ ಶಶಿಕಲಾ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ.</p>.<p>ಕರ್ನಾಟಕದಲ್ಲಿರುವ ಎಐಎಡಿಎಂಕೆ ನಾಯಕರ ನಿವಾಸದ ಮೇಲೂ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ</strong>: ಚೆನ್ನೈನಲ್ಲಿರುವ ಜಯಾ ಟಿವಿ ಕಚೇರಿ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಕೊಡನಾಡು ಎಸ್ಟೇಟ್, ಎಐಎಡಿಎಂಕೆ ನೇತಾರೆ ವಿ.ಕೆ ಶಶಿಕಲಾ ಅವಕ ಕುಟುಂಬ ಮತ್ತು ಬೆಂಬಲಿಗರಿಗೆ ಸೇರಿದ ಆಸ್ತಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.</p>.<p>ತೆರಿಗೆ ವಂಚನೆ ಮತ್ತು ಅಕ್ರಮ ಹಣ ಹೊಂದಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.</p>.<p>ಎಐಎಡಿಎಂಕೆ ಮುಖವಾಣಿ ನಮಧು ಎಂಜಿಆರ್, ಜಯಾ ಟಿವಿ, ಜಾಸ್ ಸಿನಿಮಾಸ್ ಸೇರಿದಂತೆ ಶಶಿಕಲಾ ಅವರ ಅಳಿಯ ಟಿಟಿವಿ ದಿನಕರನ್ ಅವರ ಆಸ್ತಿ ಮೇಲೂ ದಾಳಿ ನಡೆದಿದೆ.</p>.<p>ಬೆಳಗ್ಗೆ 6 ಗಂಟೆಗೆ ಚೆನ್ನೈ , ತಮಿಳುನಾಡಿನ ಪ್ರಮುಖ ನಗರಗಳು ಸೇರಿದಂತೆ ಬೆಂಗಳೂರು, ಪುದುಚ್ಚೇರಿ, ಹೈದರಾಬಾದ್, ದೆಹಲಿಯಲ್ಲಿ ಏಕಕಾಲಕ್ಕೆ ಈ ದಾಳಿ ಆರಂಭವಾಗಿದೆ.</p>.<p>ನಕಲಿ ಕಂಪೆನಿ, ಅಪ್ರಾಮಾಣಿಕ ಹೂಡಿಕೆ ಮತ್ತು ನಕಲಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದಾರೆ ಎಂಬ ಸಂದೇಹವಿರುವುದರಿಂದ ದಾಳಿ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ಮಿದಾಸ್ ಡಿಸ್ಟೆಲರೀಸ್ ಮತ್ತು ಶೌಖಾರ್ ಪೇಟೆಯಲ್ಲಿರುವ ಚಿನ್ನದ ವ್ಯಾಪಾರ ಕೇಂದ್ರಗಳ ಮೇಲೂ ಐಟಿ ಕಣ್ಣಿಟ್ಟಿದೆ.</p>.<p>ಬೆಳಗ್ಗೆ 6 ಗಂಟೆಗೆ ಐಟಿ ದಾಳಿ ನಡೆದಾಗ ನಮಧು ಎಂಜಿಆರ್, ಜಯಾ ಟಿವಿ ಕಚೇರಿಯಲ್ಲಿದ್ದ ನೌಕರರ ಮೊಬೈಲ್ ಫೋನ್ಗಳನ್ನು ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.</p>.<p>ಆಡ್ಯದಲ್ಲಿರುವ ದಿನಕರನ್ ಅವರ ನಿವಾಸ, ಶಶಿಕಲಾ ಅವರ ಪತಿ ನಟರಾಜನ್ ಅವರ ತಂಜಾವೂರಿನಲ್ಲಿರುವ ನಿವಾಸ ಮತ್ತು ಮನ್ನಾರ್ ಗುಡಿ ನಗರದಲ್ಲಿರುವ ಶಶಿಕಲಾ ಅವರ ಸಂಬಂಧಿಕರ ಮನೆ ಮೇಲೂ ದಾಳಿ ನಡೆದಿದೆ.</p>.<p>ಕರ್ನಾಟಕದಲ್ಲಿರುವ ಎಐಎಡಿಎಂಕೆ ನಾಯಕರ ನಿವಾಸದ ಮೇಲೂ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>