ಜಿಲ್ಲಾಡಳಿತವು ನಗರದ ಆಲ್ ಅಮೀನ್ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಜಯಂತಿ ಆಚರಿಸಲು ಸಿದ್ಧತೆ ಮಾಡಿಕೊಂಡಿತ್ತು. ಅಲ್ಲದೇ, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲೂ ಅದೇ ಸ್ಥಳವನ್ನು ಪ್ರಕಟಿಸಿತ್ತು. ಆದರೆ, ಇದಕ್ಕೆ ಒಪ್ಪದ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ನಸೀರ್ ಅಹಮ್ಮದ್, ಮಾಜಿ ಸಚಿವ ನಿಸಾರ್ ಅಹಮ್ಮದ್ ಹಾಗೂ ಮುಸ್ಲಿಂ ಮುಖಂಡರು ಟಿ.ಚನ್ನಯ್ಯ ರಂಗಮಂದಿರದಲ್ಲಿ ಜಯಂತಿ ಆಚರಿಸುವಂತೆ ಒತ್ತಾಯಿಸಿದ್ದಾರೆ.