ಬೆಂಗಳೂರು: ‘ಶ್ರವಣಬೆಳಗೊಳ ಶ್ರೀಕ್ಷೇತ್ರ’ದ ವತಿಯಿಂದ ಬೆಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಚಾವುಂಡರಾಯ ಪ್ರಶಸ್ತಿ’ಯನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪದ್ಮಾಶೇಖರ್ (2017) ಹಾಗೂ ಹಿರಿಯ ಪತ್ರಕರ್ತ ಪದ್ಮರಾಜ ದಂಡಾವತಿ (2016) ಅವರಿಗೆ ಇತಿಹಾಸಕಾರ ಡಾ.ಷ.ಶೆಟ್ಟರ್ ಪ್ರದಾನ ಮಾಡಿದರು. ಪ್ರಶಸ್ತಿಯು ತಲಾ ₹30 ಸಾವಿರ ನಗದು, ಫಲಕ ಹಾಗೂ ಪ್ರಶಸ್ತಿಪತ್ರ ಒಳಗೊಂಡಿದೆ.