ಉಡುಪಿ: ‘ಸರ್ಕಾರವೇ ಆಯೋಜಿಸಿದ್ದ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಸಚಿವ ಪ್ರಮೋದ್ ಮಧ್ವರಾಜ್ ಪಾಲ್ಗೊ ಳ್ಳದಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಜಿಲ್ಲಾ ಮುಸ್ಲಿಂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ ಟೀಕಿಸಿದ್ದಾರೆ.
‘ಟಿಪ್ಪು ಜಯಂತಿ ಮುಸ್ಲಿಮ್ ಸಂಘಟನೆಗಳು ಆಯೋಜಿಸಿದ್ದ ಕಾರ್ಯ ಕ್ರಮವಲ್ಲ. ತನ್ನದೇ ಸರ್ಕಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದರೆ ಏನು ಮಾಡೋಕ್ಕಾಗುತ್ತದೆ.
ಅವರಿಗೆ ಜವಾಬ್ದಾರಿ ಇದ್ದಿದ್ದರೆ ಪಾಲ್ಗೊ ಳ್ಳಬೇಕಿತ್ತು. ಅವರಿಗೆ ಮತಗಳ ಬಗ್ಗೆ ಚಿಂತೆ ಇರಬಹುದು. ಯಾವ ಕಾರ್ಯಕ್ರಮದಲ್ಲಿ ಭಾಗವಹಿಸಿದರೆ ಯಾರ ಮತ ಬರುವುದಿಲ್ಲ ಎಂಬ ಆತಂಕ ಕಾಡುತ್ತಿರಬಹುದು’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.