ಕಳೆದ ನಾಲ್ಕೂವರೆ ವರ್ಷಗಳಿಂದ ಪಕ್ಷದ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಕಳೆದ ಚುನಾವಣೆಯಲ್ಲಿ 36 ಸಾವಿರ ಮತಗಳಿಂದ ಸೋಲು ಕಂಡಿದ್ದೆ. ನಾನು ಮಾಡಿದ ಕೆಲವು ತಪ್ಪುಗಳು ಈ ಫಲಿತಾಂಶಕ್ಕೆ ಕಾರಣವಾಗಿತ್ತು. ನನ್ನ ಅವಧಿಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಇದನ್ನು ಮನಗಂಡ ಕ್ಷೇತ್ರದ ಜನರು ಮತ್ತೆ ರಾಜಕಾರಣಕ್ಕೆ ಬರಬೇಕೆಂದು ಜನರು ಒತ್ತಡ ಹಾಕುತ್ತಿದ್ದಾರೆ. ನವೆಂಬರ್ 15ರ ನಂತರ ಕ್ಷೇತ್ರದಲ್ಲಿ ಸಂಚರಿಸಿ, ಹಿರಿಯರ ಸಲಹೆಗಳನ್ನು ಪಡೆದು ಮುಂದುವರಿಯುವೆ ಎಂದರು.