<p><strong>ಬಳ್ಳಾರಿ:</strong> ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಾಣಿಕೆ ಪ್ರಕರಣಗಳ ತನಿಖೆಯನ್ನು ಅರ್ಧಕ್ಕೇ ಕೈಬಿಟ್ಟು ಸಿಬಿಐ ಕೈತೊಳೆದುಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣಗಳ ಮೂಲವನ್ನು ಹುಡುಕಿದ್ದರೆ ತನಿಖೆ ಪೂರ್ಣ ಗೊಳಿಸಲು ಸಿಬಿಐಗೆ ಸಾಧ್ಯವಿತ್ತು. 57 ಕಂಪೆನಿಗಳು ಅವ್ಯವಹಾರದಲ್ಲಿ ಪಾಲ್ಗೊಂಡಿವೆ, ಎಲ್ಲಿಂದ ಎಷ್ಟು ಅದಿರನ್ನು ಯಾವ ಕಂಪೆನಿ ಸಾಗಿಸಿದೆ ಎಂದು ಹೇಳುವ ಸಿಬಿಐ, ತನಿಖೆಯನ್ನು ಪೂರ್ಣಗೊಳಿಸಬಹುದಾಗಿತ್ತು’ ಎಂದರು.</p>.<p>‘ಇದು ಸಿಬಿಐನ ಅಸಮರ್ಥತೆಯನ್ನು ತೋರುತ್ತದೆ ಎಂಬುದಕ್ಕಿಂತಲೂ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ಆಗಿರುವ ಆಗಿರುವ ನಷ್ಟ ದೊಡ್ಡದು. ಆ ಅಂಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆ ಸಂಬಂಧ ಗೃಹ ಸಚಿವರ ಅಧ್ಯಕ್ಷತೆಯಲ್ಲಿರುವ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಕೆಲವು ತೀರ್ಮಾನ ಕೈಗೊಂಡಿದೆ. ನಾನು ಗೃಹ ಸಚಿವನಾದ ಬಳಿಕ ಸಮಿತಿ ಸಭೆ ನಡೆದಿಲ್ಲ’ ಎಂದರು.</p>.<p>‘ಪರಿಶಿಷ್ಟ ಸಮುದಾಯದ ನೌಕರರಿಗೆ ಬಡ್ತಿ ಮೀಸಲಾತಿ ನೀಡಬೇಕೆಂದು ಸಂಪುಟದಲ್ಲಿ ತೀರ್ಮಾನಿಸಲಾಗಿದ್ದು, ಈ ಸಂಬಂಧ ಅಧಿವೇಶನದಲ್ಲಿ ಚರ್ಚೆ ನಡೆಯಬೇಕಾಗಿದೆ’ ಎಂದರು. ಕಲಬುರ್ಗಿ ಹಂತಕರ ಬಂಧನ ಶೀಘ್ರ ‘ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಶಂಕಿತರನ್ನು ಎಸ್ಐಟಿ ವಶಕ್ಕೆ ಪಡೆದಿದೆ.</p>.<p>ಅವರು ಎಡಪಂಥೀಯರೋ ಬಲಪಂಥೀಯರೋ ಎಂಬುದನ್ನು ಈಗಲೇ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಎಂ.ಎಂ. ಕಲಬುರ್ಗಿ ಅವರ ಕೊಲೆ ಆರೋಪಿಗಳನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು. ಅದಕ್ಕೆ ಎಲ್ಲರೂ ಸ್ವಲ್ಪ ಸಾವಧಾನವಾಗಿರಬೇಕಷ್ಟೇ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಾಣಿಕೆ ಪ್ರಕರಣಗಳ ತನಿಖೆಯನ್ನು ಅರ್ಧಕ್ಕೇ ಕೈಬಿಟ್ಟು ಸಿಬಿಐ ಕೈತೊಳೆದುಕೊಂಡಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ವ್ಯಂಗ್ಯವಾಡಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣಗಳ ಮೂಲವನ್ನು ಹುಡುಕಿದ್ದರೆ ತನಿಖೆ ಪೂರ್ಣ ಗೊಳಿಸಲು ಸಿಬಿಐಗೆ ಸಾಧ್ಯವಿತ್ತು. 57 ಕಂಪೆನಿಗಳು ಅವ್ಯವಹಾರದಲ್ಲಿ ಪಾಲ್ಗೊಂಡಿವೆ, ಎಲ್ಲಿಂದ ಎಷ್ಟು ಅದಿರನ್ನು ಯಾವ ಕಂಪೆನಿ ಸಾಗಿಸಿದೆ ಎಂದು ಹೇಳುವ ಸಿಬಿಐ, ತನಿಖೆಯನ್ನು ಪೂರ್ಣಗೊಳಿಸಬಹುದಾಗಿತ್ತು’ ಎಂದರು.</p>.<p>‘ಇದು ಸಿಬಿಐನ ಅಸಮರ್ಥತೆಯನ್ನು ತೋರುತ್ತದೆ ಎಂಬುದಕ್ಕಿಂತಲೂ ಅಕ್ರಮ ಗಣಿಗಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ ಆಗಿರುವ ಆಗಿರುವ ನಷ್ಟ ದೊಡ್ಡದು. ಆ ಅಂಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತನಿಖೆ ಸಂಬಂಧ ಗೃಹ ಸಚಿವರ ಅಧ್ಯಕ್ಷತೆಯಲ್ಲಿರುವ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಕೆಲವು ತೀರ್ಮಾನ ಕೈಗೊಂಡಿದೆ. ನಾನು ಗೃಹ ಸಚಿವನಾದ ಬಳಿಕ ಸಮಿತಿ ಸಭೆ ನಡೆದಿಲ್ಲ’ ಎಂದರು.</p>.<p>‘ಪರಿಶಿಷ್ಟ ಸಮುದಾಯದ ನೌಕರರಿಗೆ ಬಡ್ತಿ ಮೀಸಲಾತಿ ನೀಡಬೇಕೆಂದು ಸಂಪುಟದಲ್ಲಿ ತೀರ್ಮಾನಿಸಲಾಗಿದ್ದು, ಈ ಸಂಬಂಧ ಅಧಿವೇಶನದಲ್ಲಿ ಚರ್ಚೆ ನಡೆಯಬೇಕಾಗಿದೆ’ ಎಂದರು. ಕಲಬುರ್ಗಿ ಹಂತಕರ ಬಂಧನ ಶೀಘ್ರ ‘ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿ ಶಂಕಿತರನ್ನು ಎಸ್ಐಟಿ ವಶಕ್ಕೆ ಪಡೆದಿದೆ.</p>.<p>ಅವರು ಎಡಪಂಥೀಯರೋ ಬಲಪಂಥೀಯರೋ ಎಂಬುದನ್ನು ಈಗಲೇ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಎಂ.ಎಂ. ಕಲಬುರ್ಗಿ ಅವರ ಕೊಲೆ ಆರೋಪಿಗಳನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು. ಅದಕ್ಕೆ ಎಲ್ಲರೂ ಸ್ವಲ್ಪ ಸಾವಧಾನವಾಗಿರಬೇಕಷ್ಟೇ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>