ರಾಜ್ಯ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಗಳ 62 ಮಂಜೂರಾದ ಹುದ್ದೆಗಳಿವೆ. ಆದರೆ, ಕೇವಲ 25 ಜನ ನ್ಯಾಯಮೂರ್ತಿಗಳು ಸೇವೆಯಲ್ಲಿದ್ದಾರೆ. ಶೇ 60ರಷ್ಟು ಹುದ್ದೆಗಳು ಖಾಲಿ ಇರುವುದರಿಂದ ನ್ಯಾಯದಾನ ಬಯಸಿ ಬರುವ ಸಾರ್ವಜನಿಕರ ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತಿದೆ ಎಂದು ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ರಾಜು ರಾಮಚಂದ್ರನ್ ಹೇಳಿದರು.