‘ಈ ಪ್ರಕರಣದಲ್ಲಿ ಜಾರ್ಜ್ ನಿರಪರಾಧಿ. ಅವರ ಪಕ್ಷದ ವರಿಷ್ಠರು ಸೂಚಿಸಿದ ಕಾರಣಕ್ಕೆ ವಿವಾದ ಸೃಷ್ಟಿಸಲು ಮುಂದಾಗಿದ್ದಾರೆ. ರಾಜಕೀಯವಾಗಿ ಇದನ್ನು ಎದುರಿಸಬೇಕಾಗಿದೆ. ಎರಡು ದಿನಕ್ಕಿಂತ ಹೆಚ್ಚು ದಿನ ಅವರು ಮುಂದುವರಿಸಲಾರರು. ಅದನ್ನು ಮೀರಿ ಮುಂದುವರಿಸಿದರೆ, ಬಿಜೆಪಿಯವರು ಉತ್ತರ ಕರ್ನಾಟಕದ ವಿರೋಧಿಗಳು ಎಂದೂ ಸದನದಲ್ಲಿ ಪ್ರಸ್ತಾಪಿಸಲು ಹಿಂಜರಿಯುವುದು ಬೇಡ’ ಎಂದು ಮುಖ್ಯಮಂತ್ರಿ ಹೇಳಿದ್ದಾಗಿ ಮೂಲಗಳು ತಿಳಿಸಿವೆ.