ಯಲಹಂಕ ಉಪನಗರದಲ್ಲಿ ಜೆಡಿಎಸ್ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲಿ ಪ್ರಾದೇಶಿಕ ಪಕ್ಷಗಳು ಹಲವು ವರ್ಷಗಳಿಂದ ಆಡಳಿತ ನಡೆಸುತ್ತಿವೆ. ಅಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಇಂದಿಗೂ ತಲೆ ಎತ್ತಲು ಸಾಧ್ಯವಾಗಿಲ್ಲ. ಆದರೆ, ನಮ್ಮ ಕನ್ನಡಿಗರಿಗೆ ಸ್ವಾಭಿಮಾನವಿಲ್ಲವೇ ಎಂದು ಪ್ರಶ್ನಿಸಿದರು.