ರಾಮನಗರದ ಸುತ್ತಮುತ್ತಲ ಗ್ರಾಮಗಳಿಂದ ಇಲ್ಲಿಗೆ ಕೆಲಸಕ್ಕೆ ಬರುತ್ತಿದ್ದೇವೆ. ಆರು ವರ್ಷಗಳಿಂದ ಇದೇ ಕಾರ್ಖಾನೆಯಲ್ಲಿ ದುಡಿಯುತ್ತಿದ್ದೇವೆ. ಕಾರ್ಖಾನೆಯನ್ನು ಬೊಮ್ಮನಹಳ್ಳಿಗೆ ಸ್ಥಳಾಂತರ ಮಾಡುವುದಾಗಿ ಆಡಳಿತ ಮಂಡಳಿ ಇತ್ತೀಚೆಗೆ ತಿಳಿಸಿದೆ. ಇದರಿಂದ ಓಡಾಟಕ್ಕೆ ತೊಂದರೆಯಾಗುತ್ತದೆ. ಹೀಗಾಗಿ, ಕಾರ್ಖಾನೆ ಸ್ಥಳಾಂತರ ಮಾಡಬಾರದು ಎಂದು ಪ್ರತಿಭಟನಾನಿರತ ಕಾರ್ಮಿಕರು ಆಗ್ರಹಿಸಿದರು.