<p><strong>ಗಂಗಾವತಿ:</strong> ರಾಜಕೀಯ ಸ್ವಾರ್ಥಕ್ಕೆ ಅಶ್ಲೀಲ ಪದಬಳಕೆ ಮಾಡಿಕೊಂಡು ವೈಯಕ್ತಿಕ ಟೀಕೆಯಲ್ಲಿ ತೊಡಗಿ ಜನರಿಗೆ ತೊಂದರೆ ನೀಡುತ್ತಿರುವ ಹಾಲಿ ಹಾಗೂ ಮಾಜಿ ಶಾಸಕರಾದ ಇಕ್ಬಾಲ್ ಅನ್ಸಾರಿ, ಎಚ್.ಆರ್. ಶ್ರೀನಾಥ್ ಮೇಲೆ ಕಾನೂನು ಕ್ರಮಕ್ಕೆ ಉದ್ಯಮಿ ಕೊಲ್ಲಿ ನಾಗೇಶ್ವರ ರಾವ್ ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಸಲ್ಲಿಸಿರುವ ಅವರು, ನಗರದ ಶಾಂತಿ ಭಂಗಕ್ಕೆ ಯತ್ನಿಸುತ್ತಿರುವ ಹಾಗೂ ಪರಸ್ಪರ ದೋಷಾರೋಪಣೆಯಲ್ಲಿ ತೊಡಗಿರುವ ಉಭಯರ ಮೇಲೆ ಕಾನೂನು ಕ್ರಮಕ್ಕೆ ಗೃಹ ಇಲಾಖೆ, ಬಳ್ಳಾರಿ ವಲಯದ ಐಜಿ, ಕೊಪ್ಪಳ ಎಸ್ಪಿ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ್ ನ.15ಕ್ಕೆ, ಹಾಲಿ ಶಾಸಕ ಇಕ್ಬಾಲ್ ಅನ್ಸಾರಿ ನ.16ಕ್ಕೆ ಗಂಗಾವತಿ ಬಂದ್ ಮಾಡಲು ಪೊಲೀಸ್ ಇಲಾಖೆಗೆ ಮನವಿ ನೀಡಿದ್ದಾರೆ. ಆದರೆ ಇಲಾಖೆ ಇಬ್ಬರಿಗೂ ಗಂಗಾವತಿ ಬಂದ್ ಮಾಡಿಸಲು ಅನುಮತಿ ನೀಡಿಲ್ಲ.</p>.<p>ಗಂಗಾವತಿ ಬಂದ್ ಘಟನೆಯಿಂದಾಗಿ ನಗರ ಮಾತ್ರವಲ್ಲ, ಗ್ರಾಮೀಣ ಭಾಗದ ಮಂದಿರ, ಮಸೀದಿಗಳಲ್ಲಿ ಜನ ಸೇರಲಿದ್ದು, ಇದು ಕೋಮು ಗಲಭೆಗೆ ಕಾರಣವಾಗಲಿದೆ. ಶಾಂತಿ ನೆಮ್ಮದಿ ಕದಡಲು ಯತ್ನಿಸುತ್ತಿರುವ ಈ ಇಬ್ಬರ ಮೇಲೆ ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದು ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಾಜ್ಯ ಘಟಕದ ಅಧ್ಯಕ್ಷರೂ ಆದ ನಾಗೇಶ್ವರ ರಾವ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ರಾಜಕೀಯ ಸ್ವಾರ್ಥಕ್ಕೆ ಅಶ್ಲೀಲ ಪದಬಳಕೆ ಮಾಡಿಕೊಂಡು ವೈಯಕ್ತಿಕ ಟೀಕೆಯಲ್ಲಿ ತೊಡಗಿ ಜನರಿಗೆ ತೊಂದರೆ ನೀಡುತ್ತಿರುವ ಹಾಲಿ ಹಾಗೂ ಮಾಜಿ ಶಾಸಕರಾದ ಇಕ್ಬಾಲ್ ಅನ್ಸಾರಿ, ಎಚ್.ಆರ್. ಶ್ರೀನಾಥ್ ಮೇಲೆ ಕಾನೂನು ಕ್ರಮಕ್ಕೆ ಉದ್ಯಮಿ ಕೊಲ್ಲಿ ನಾಗೇಶ್ವರ ರಾವ್ ಆಗ್ರಹಿಸಿದ್ದಾರೆ.</p>.<p>ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿಸಲ್ಲಿಸಿರುವ ಅವರು, ನಗರದ ಶಾಂತಿ ಭಂಗಕ್ಕೆ ಯತ್ನಿಸುತ್ತಿರುವ ಹಾಗೂ ಪರಸ್ಪರ ದೋಷಾರೋಪಣೆಯಲ್ಲಿ ತೊಡಗಿರುವ ಉಭಯರ ಮೇಲೆ ಕಾನೂನು ಕ್ರಮಕ್ಕೆ ಗೃಹ ಇಲಾಖೆ, ಬಳ್ಳಾರಿ ವಲಯದ ಐಜಿ, ಕೊಪ್ಪಳ ಎಸ್ಪಿ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಮಾಜಿ ಎಂಎಲ್ಸಿ ಎಚ್.ಆರ್. ಶ್ರೀನಾಥ್ ನ.15ಕ್ಕೆ, ಹಾಲಿ ಶಾಸಕ ಇಕ್ಬಾಲ್ ಅನ್ಸಾರಿ ನ.16ಕ್ಕೆ ಗಂಗಾವತಿ ಬಂದ್ ಮಾಡಲು ಪೊಲೀಸ್ ಇಲಾಖೆಗೆ ಮನವಿ ನೀಡಿದ್ದಾರೆ. ಆದರೆ ಇಲಾಖೆ ಇಬ್ಬರಿಗೂ ಗಂಗಾವತಿ ಬಂದ್ ಮಾಡಿಸಲು ಅನುಮತಿ ನೀಡಿಲ್ಲ.</p>.<p>ಗಂಗಾವತಿ ಬಂದ್ ಘಟನೆಯಿಂದಾಗಿ ನಗರ ಮಾತ್ರವಲ್ಲ, ಗ್ರಾಮೀಣ ಭಾಗದ ಮಂದಿರ, ಮಸೀದಿಗಳಲ್ಲಿ ಜನ ಸೇರಲಿದ್ದು, ಇದು ಕೋಮು ಗಲಭೆಗೆ ಕಾರಣವಾಗಲಿದೆ. ಶಾಂತಿ ನೆಮ್ಮದಿ ಕದಡಲು ಯತ್ನಿಸುತ್ತಿರುವ ಈ ಇಬ್ಬರ ಮೇಲೆ ಕಾನೂನು ಕ್ರಮಕ್ಕೆ ಶಿಫಾರಸ್ಸು ಮಾಡಬೇಕು ಎಂದು ಅಂತರಾಷ್ಟ್ರೀಯ ಮಾನವ ಹಕ್ಕುಗಳ ರಾಜ್ಯ ಘಟಕದ ಅಧ್ಯಕ್ಷರೂ ಆದ ನಾಗೇಶ್ವರ ರಾವ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>