<p><strong>ಮುಂಬೈ</strong>: ಗೋವಾದಲ್ಲಿ ನಡೆಯುವ 48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಿಂದ (ಐಎಫ್ಎಫ್ಐ) ಎರಡು ಚಿತ್ರಗಳನ್ನು ಕೈಬಿಟ್ಟ ಸಂಬಂಧ ಪನೋರಮಾ ವಿಭಾಗದ ಚಿತ್ರಗಳ ಆಯ್ಕೆ ಸಮಿತಿಯ ಮುಖ್ಯಸ್ಥ, ಚಿತ್ರಕರ್ಮಿ ಸುಜಯ್ ಘೋಷ್ ರಾಜೀನಾಮೆ ನೀಡಿದ್ದಾರೆ. ಅವರು ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.</p>.<p>13 ತೀರ್ಪುಗಾರರ ಸಮಿತಿ ಶಿಫಾರಸು ಮಾಡಿದ್ದ ಸಿನಿಮಾಗಳ ಪಟ್ಟಿಯಿಂದ ಮಲಯಾಳದ ‘ಎಸ್ ದುರ್ಗಾ’ ಮತ್ತು ಮರಾಠಿಯ ‘ನ್ಯೂಡ್’ ಚಿತ್ರಗಳನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಕೈಬಿಟ್ಟಿದೆ. ಆದರೆ ಸಚಿವಾಲಯವುಈ ಸಂಬಂಧ ಯಾವುದೇ ಹೇಳಿಕೆ ನೀಡಿಲ್ಲ.</p>.<p>2017ನೇ ಸಾಲಿನ ರಾಟ್ಟರ್ಡ್ಯಾಮ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಎಸ್ ದುರ್ಗಾ’ ಚಿತ್ರವು ‘ಹಿವೋಸ್ ಟೈಗರ್’ ಪ್ರಶಸ್ತಿಯನ್ನು ಪಡೆದಿದೆ.</p>.<p>ಇದೇ 20ರಿಂದ 28ರವರೆಗೆ ಚಿತ್ರೋತ್ಸವ ನಡೆಯಲಿದೆ.</p>.<p><strong>ಅಸಂಬದ್ಧ ಕ್ರಮ</strong></p>.<p>‘ಚಿತ್ರೋತ್ಸವದಿಂದ ಸಿನಿಮಾಗಳನ್ನು ಕೈಬಿಟ್ಟಿರುವುದು ಅಸಂಬದ್ಧ’ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ. ‘ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಆಗುತ್ತಿದೆ. ಇಂಥ ವಿವೇಚನೆ ಇಲ್ಲದ ಸೆನ್ಸಾರ್ಶಿಪ್ ವಿರುದ್ಧ ಸೃಜನಶೀಲ ಸಮುದಾಯವು ಸಿಡಿದೇಳಲು ಇದು ಸೂಕ್ತ ಸಮಯ’ ಎಂದು ಅವರು ಕರೆ ನೀಡಿದ್ದಾರೆ.</p>.<p><strong>ದೂರು ದಾಖಲು</strong></p>.<p>ಗೋವಾ ಚಿತ್ರೋತ್ಸವದಿಂದ ಮಲಯಾಳದ ‘ಎಸ್ ದುರ್ಗಾ’ ಚಿತ್ರವನ್ನು ಹೊರಗಿಟ್ಟಿರುವುದಕ್ಕೆ, ನಿರ್ದೇಶಕ ಸನಲ್ ಕುಮಾರ್ ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಐಎಫ್ಎಫ್ಐ ಅಧಿಕಾರಿಗಳ ವಿರುದ್ಧ ಕೇರಳ ಹೈಕೋರ್ಟ್ನಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಗೋವಾದಲ್ಲಿ ನಡೆಯುವ 48ನೇ ಭಾರತೀಯ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಿಂದ (ಐಎಫ್ಎಫ್ಐ) ಎರಡು ಚಿತ್ರಗಳನ್ನು ಕೈಬಿಟ್ಟ ಸಂಬಂಧ ಪನೋರಮಾ ವಿಭಾಗದ ಚಿತ್ರಗಳ ಆಯ್ಕೆ ಸಮಿತಿಯ ಮುಖ್ಯಸ್ಥ, ಚಿತ್ರಕರ್ಮಿ ಸುಜಯ್ ಘೋಷ್ ರಾಜೀನಾಮೆ ನೀಡಿದ್ದಾರೆ. ಅವರು ಪ್ರತಿಕ್ರಿಯೆಗೆ ನಿರಾಕರಿಸಿದ್ದಾರೆ.</p>.<p>13 ತೀರ್ಪುಗಾರರ ಸಮಿತಿ ಶಿಫಾರಸು ಮಾಡಿದ್ದ ಸಿನಿಮಾಗಳ ಪಟ್ಟಿಯಿಂದ ಮಲಯಾಳದ ‘ಎಸ್ ದುರ್ಗಾ’ ಮತ್ತು ಮರಾಠಿಯ ‘ನ್ಯೂಡ್’ ಚಿತ್ರಗಳನ್ನು ವಾರ್ತಾ ಮತ್ತು ಪ್ರಸಾರ ಸಚಿವಾಲಯ ಕೈಬಿಟ್ಟಿದೆ. ಆದರೆ ಸಚಿವಾಲಯವುಈ ಸಂಬಂಧ ಯಾವುದೇ ಹೇಳಿಕೆ ನೀಡಿಲ್ಲ.</p>.<p>2017ನೇ ಸಾಲಿನ ರಾಟ್ಟರ್ಡ್ಯಾಮ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ‘ಎಸ್ ದುರ್ಗಾ’ ಚಿತ್ರವು ‘ಹಿವೋಸ್ ಟೈಗರ್’ ಪ್ರಶಸ್ತಿಯನ್ನು ಪಡೆದಿದೆ.</p>.<p>ಇದೇ 20ರಿಂದ 28ರವರೆಗೆ ಚಿತ್ರೋತ್ಸವ ನಡೆಯಲಿದೆ.</p>.<p><strong>ಅಸಂಬದ್ಧ ಕ್ರಮ</strong></p>.<p>‘ಚಿತ್ರೋತ್ಸವದಿಂದ ಸಿನಿಮಾಗಳನ್ನು ಕೈಬಿಟ್ಟಿರುವುದು ಅಸಂಬದ್ಧ’ ಎಂದು ಕಾಂಗ್ರೆಸ್ ಮುಖಂಡ ಮನೀಶ್ ತಿವಾರಿ ಟ್ವೀಟ್ ಮಾಡಿದ್ದಾರೆ. ‘ಅಭಿವ್ಯಕ್ತಿ ಸ್ವಾತಂತ್ರ್ಯದ ಕಗ್ಗೊಲೆ ಆಗುತ್ತಿದೆ. ಇಂಥ ವಿವೇಚನೆ ಇಲ್ಲದ ಸೆನ್ಸಾರ್ಶಿಪ್ ವಿರುದ್ಧ ಸೃಜನಶೀಲ ಸಮುದಾಯವು ಸಿಡಿದೇಳಲು ಇದು ಸೂಕ್ತ ಸಮಯ’ ಎಂದು ಅವರು ಕರೆ ನೀಡಿದ್ದಾರೆ.</p>.<p><strong>ದೂರು ದಾಖಲು</strong></p>.<p>ಗೋವಾ ಚಿತ್ರೋತ್ಸವದಿಂದ ಮಲಯಾಳದ ‘ಎಸ್ ದುರ್ಗಾ’ ಚಿತ್ರವನ್ನು ಹೊರಗಿಟ್ಟಿರುವುದಕ್ಕೆ, ನಿರ್ದೇಶಕ ಸನಲ್ ಕುಮಾರ್ ಅವರು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಐಎಫ್ಎಫ್ಐ ಅಧಿಕಾರಿಗಳ ವಿರುದ್ಧ ಕೇರಳ ಹೈಕೋರ್ಟ್ನಲ್ಲಿ ದೂರು ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>