ಭಾರತೀಯ ವಿಜ್ಞಾನ ಸಂಸ್ಥೆಯ ಮಾಜಿ ನಿರ್ದೇಶಕ ಪಿ.ಬಲರಾಂ ಮಾತನಾಡಿ, ಪರಿಸರ ಮಾಲಿನ್ಯ, ಹವಾಮಾನ ಬದಲಾವಣೆ, ಕುಲಾಂತರಿ ತಳಿ ತಂತ್ರಜ್ಞಾನ, ಕಾಂಡಕೋಶ ತಂತ್ರಜ್ಞಾನ, ಕೃತಕ ಬುದ್ಧಿ ಮತ್ತೆ ಮುಂತಾದ ವಿಷಯಗಳ ಬಗ್ಗೆ ಜನ ಸಾಮಾನ್ಯರಿಗೆ ತಿಳಿವಳಿಕೆ ಮೂಡಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು. ಅಲ್ಲದೆ, ಪಠ್ಯದಲ್ಲಿ ಇಲ್ಲದ ಇಂತಹ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಲ್ಲೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.