ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಧಾರದಿಂದ ಹಿಂದೆ ಸರಿಯಲ್ಲ; ನನ್ನ ನಿರ್ಧಾರ ಎಂದೂ ಗಟ್ಟಿಯಾಗಿರುತ್ತದೆ: ರಮೇಶ್‌ ಕುಮಾರ್‌

Last Updated 16 ನವೆಂಬರ್ 2017, 12:03 IST
ಅಕ್ಷರ ಗಾತ್ರ

ಬೆಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಉತ್ತಮ ಸೇವೆ ಲಭ್ಯವಾಗಬೇಕು. ವೈದ್ಯಕೀಯ ವೃತ್ತಿಯಲ್ಲಿರುವವರಿಗೆ ನೋವಾಗಬಾರದು ಎಂಬುದು ನಮ್ಮ ಆಶಯ ಎಂದು ಆರೋಗ್ಯ ಸಚಿವ ರಮೇಶ್‌ ಕುಮಾರ್‌ ಹೇಳಿದರು.

ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ (ಕೆಪಿಎಂಇ) ವಿರೋಧಿಸಿ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಖಾಸಗಿ ಆಸ್ಪತ್ರೆಗಳ ವೈದ್ಯರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಮತ್ತೊಂದೆಡೆ ಆಸ್ಪತ್ರೆಗಳ ಮುಂದೆ ರೋಗಿಗಳು ಪರದಾಡುತ್ತಿದ್ದಾರೆ. ಹಲವರು ಸೂಕ್ತ ಚಿಕಿತ್ಸೆ ಲಭ್ಯವಾಗದೆ ಮೃತಪಟ್ಟ ಬಗ್ಗೆ ವರದಿಯಾಗುತ್ತಿವೆ.

ಈ ಸಂದರ್ಭದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ಮಾತನಾಡಿದ ರಮೇಶ್‌ ಕುಮಾರ್‌ ಅವರು, ಖಾಸಗಿ ವೈದ್ಯರು ಮನವಿ ಮಾಡಬಹುದು; ನಿರ್ದೇಶನ ಮಾಡಬಾರದು ಎಂದರು.

ನಾನು(ಸರ್ಕಾರ) ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ. ನನ್ನ ನಿರ್ಧಾರ ಎಂದೂ ಗಟ್ಟಿಯಾಗಿರುತ್ತದೆ. ಸದನದಲ್ಲಿ ನಾವು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.

ಯಾರೂ ಬೇಜವಾಬ್ದಾರಿಯಿಂದ ವರ್ತಿಸಬಾರದು. ನಮ್ಮಿಂದ ತಪ್ಪಾದರೆ ಜನರೇ ಶಿಕ್ಷಿಸುತ್ತಾರೆ. ವೈದ್ಯಕೀಯ ವೃತ್ತಿಯಲ್ಲಿರುವವರಿಗೆ ನೋವಾಗದಂತೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಪ್ರತಿಭಟನೆ ಮಾಡಿ ಕಾನೂನಿನಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲ. ಅದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದನದಲ್ಲಿ ಅಂತಿಮ ತೀರ್ಮಾನವಾಗುತ್ತದೆ ಎಂದರು.

ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ ಎಂದು ರಮೇಶ್ ಕುಮಾರ್‌ ಪುನರುಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT