‘ವರ್ಕ್ಶಾಪ್ ಸ್ಥಳ ನಿಷೇಧಿತ ಪ್ರದೇಶವಾಗಿದೆ. ಇಷ್ಟಕ್ಕೂ ಅಲ್ಲಿಗೆ ಯಾವ ಕಾರಣಕ್ಕೆ ಭೇಟಿ ನೀಡುತ್ತೀರಾ? ಭೇಟಿ ನೀಡಲೇಬೇಕಾದರೆ, ಪತ್ರ ಬರೆದು ಅನುಮತಿ ಪಡೆಯಬೇಕು ಎಂದು ಪ್ರಧಾನ ವ್ಯವಸ್ಥಾಪಕರು ಗೌಡರಿಗೆ ಸಲಹೆ ನೀಡಿದರು. ಆ ಪ್ರಕಾರ ಗೌಡರ ದೆಹಲಿ ಕಚೇರಿಯಿಂದ ಇ–ಮೇಲ್ನಲ್ಲಿ ಅನುಮತಿ ಕೋರಿ ಪತ್ರ ಕೂಡ ತರಿಸಿದರು. ಅದರ ನಂತರ ರೈಲ್ವೆ ಪ್ರಧಾನ ವ್ಯವಸ್ಥಾಪಕರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ’ ಎಂದು ಶಾಸಕ ಎನ್.ಎಚ್.ಕೋನರಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.