ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಮಿಕಾ ಸಂಕ್ರಾಂತಿ ಲಲಿತಪ್ರಬಂಧ ಸ್ಪರ್ಧೆ - 2018

Last Updated 17 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಸೃಷ್ಟಿಯ ಜೀವಂತ ಕಾವ್ಯವೇ ಹೆಣ್ಣು – ಎಂಬ ಮಾತಿದೆ. ಹೀಗಾಗಿ ಹೆಣ್ಣಿಗೂ ಭಾವನೆಗಳಿಗೂ ಸಹಜ ಸಂಬಂಧ. ಅವಳ ಭಾವನೆಗಳು ಸಾಗರದಷ್ಟು ಆಳವೂ ಹೌದು, ಶಿಖರದಷ್ಟು ಎತ್ತರವೂ ಹೌದು, ಪ್ರಕೃತಿಯಷ್ಟು ವೈವಿಧ್ಯವೂ ಹೌದು; ಅದು ಬೆಳಕಿನಂತೆ ಪಾರದರ್ಶಕ, ಕತ್ತಲೆಯಂತೆ ರಹಸ್ಯ, ಪರಿಮಳದಂತೆ ಮೋಹಕ, ಮುಳ್ಳಿನಂತೆ ಮೊನಚು. ಈ ಭಾವನೆಗಳಿಗೆ ಬರಹದ ರೂಪವೂ ಒದಗಿದರೆ ಗದ್ಯವೂ ಕಾವ್ಯವೇ ಸರಿ. ನಿಮ್ಮ ಭಾವನೆಗಳಿಗೆ ಪ್ರಬಂಧದ ರೂಪವನ್ನು ಕೊಡಿ. ಅದನ್ನು ನಮಗೆ ಕಳುಹಿಸಿ; ಬಹುಮಾನವನ್ನು ಗಳಿಸಿ.

ಪ್ರತಿ ವರ್ಷದಂತೆ ಈ ವರ್ಷವೂ ಪ್ರಜಾವಾಣಿ ‘ಸಂಕ್ರಾಂತಿ ಲಲಿತಪ್ರಬಂಧ ಸ್ಪರ್ಧೆ’ಯನ್ನು ಆಯೋಜಿಸಿದೆ. ಇದರಲ್ಲಿ ಮಹಿಳೆಯರೆಲ್ಲರೂ ಭಾಗವಹಿಸಬಹುದು.

**
ಸ್ಪರ್ಧೆಯ ನಿಯಮಗಳು
* ನಿಮ್ಮ ಬರಹ ಲಲಿತಪ್ರಬಂಧದ ಪ್ರಕಾರಕ್ಕೆ ಸೇರುವಂತಿಬೇಕು.
* ಸ್ವತಂತ್ರ ರಚನೆಯಾಗಿರಬೇಕು.
* ಬ್ಲಾಗ್‌, ಸಾಮಾಜಿಕ ಜಾಲತಾಣ ಸೇರಿದಂತೆ ಯಾವ ಮಾಧ್ಯಮದಲ್ಲೂ ಪ್ರಕಟ/ಪ್ರಸಾರ ಆಗಿರಕೂಡದು.
* ಅಂತಿಮ ದಿನಾಂಕದ ಬಳಿಕ ಬಂದ ಪ್ರಬಂಧಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.
* ‘ದಿ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್ ಲಿಮಿಟೆಡ್‌’ನ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ.
* ಬಹುಮಾನಿತ ಪ್ರಬಂಧಗಳನ್ನು ಯಾವುದೇ ಸ್ವರೂಪದಲ್ಲಿ, ಯಾವಾಗ ಬೇಕಾದರೂ ಬಳಸುವ ಹಕ್ಕುಗಳನ್ನು ‘ದಿ ಪ್ರಿಂಟರ್ಸ್‌ (ಮೈಸೂರು) ಪ್ರೈವೇಟ್ ಲಿಮಿಟೆಡ್‌’ ಕಾಯ್ದಿರಿಸಿಕೊಂಡಿದೆ; ಸಂಪಾದಕರ ತೀರ್ಮಾನವೇ ಅಂತಿಮ.
* ಪ್ರಬಂಧಗಳು ಒಂದು ಸಾವಿರ ಪದಗಳನ್ನು ಮೀರದಂತಿರಲಿ.
* ನುಡಿ, ಬರಹ ಅಥವಾ ಯೂನಿಕೋಡ್‌ಗಳಲ್ಲಿ ಪ್ರಬಂಧಗಳನ್ನು ಕಳುಹಿಸಬಹುದು. ಇ–ಮೇಲ್: bhoomika@prajavani.co.in
* ಕೈಬರಹದ ಪ್ರಬಂಧಗಳನ್ನು ಅಂಚೆ/ಕೊರಿಯರ್‌ ಮೂಲಕ ಕಳುಹಿಸಬೇಕು.
ನಮ್ಮ ವಿಳಾಸ: ಸಂಪಾದಕರು, ಭೂಮಿಕಾ ಪುರವಣಿ, ಪ್ರಜಾವಾಣಿ, ನಂ. 75, ಮಹಾತ್ಮ ಗಾಂಧಿ ರಸ್ತೆ, ಬೆಂಗಳೂರು – 560 001.

* ನಿಮ್ಮ ಇತ್ತೀಚಿನ ಭಾವಚಿತ್ರ, ವಿಳಾಸ, ದೂರವಾಣಿ ವಿವರಗಳು ಕಡ್ಡಾಯ.
* ತೀರ್ಪುಗಾರರ ನಿರ್ಣಯವೇ ಅಂತಿಮ; ಪತ್ರವ್ಯವಹಾರಕ್ಕೆ ಅವಕಾಶವಿಲ್ಲ.
* ಪ್ರಬಂಧಗಳನ್ನು ಹಿಂದಿರುಗಿಸಲಾಗುವುದಿಲ್ಲ.
* ಬಹುಮಾನಿತ ಪ್ರಬಂಧಗಳನ್ನು ಭೂಮಿಕಾದಲ್ಲಿ ಪ್ರಕಟಿಸಲಾಗುವುದು.

**
ಬಹುಮಾನಗಳ ವಿವರ: ಮೊದಲನೆಯ ಬಹುಮಾನ: ₹ 7,500
ಎರಡನೆಯ ಬಹುಮಾನ: ₹ 5,000
ಮೂರನೆಯ ಬಹುಮಾನ: ₹ 2,500

*
ಪ್ರಬಂಧಗಳು ನಮ್ಮನ್ನು ತಲುಪಬೇಕಾದ ಅಂತಿಮ ದಿನಾಂಕ: ಡಿಸೆಂಬರ್‌ 25, 2017

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT