‘ಪ್ರಮಾಣೀಕರಣಕ್ಕೆ ಸಲ್ಲಿಸಿದ್ದ ಅರ್ಜಿಯಲ್ಲಿ ಚಿತ್ರದ ಕಥೆ ಕಾಲ್ಪನಿಕವೇ ಅಥವಾ ಇತಿಹಾಸ ಆಧಾರಿತವೇ ಎಂಬುದನ್ನು ಚಿತ್ರ ತಂಡ ಸ್ಪಷ್ಟಪಡಿಸಿರಲಿಲ್ಲ. ಹೀಗಾಗಿ ಚಿತ್ರವನ್ನು ವೀಕ್ಷಿಸದೆ ವಾಪಸ್ ಕಳುಹಿಸಲಾಗಿತ್ತು. ಆದರೆ, ಚಿತ್ರ ತಂಡ ಮಂಡಳಿ ಮೇಲೆ ಗೂಬೆ ಕೂರಿಸುತ್ತಿರುವುದು ಆಘಾತಕಾರಿಯಾಗಿದೆ’ ಎಂದು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್ಸಿ) ಅಧ್ಯಕ್ಷ ಪ್ರಸೂನ್ ಜೋಷಿ ಅಸಮಾಧಾನ ವ್ಯಕ್ತ
ಪಡಿಸಿದ್ದಾರೆ.