ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಡಿಯೂರಪ್ಪಗೆ ಬುದ್ಧಿ ಇಲ್ಲ, ಈಶ್ವರಪ್ಪ ಬುದ್ಧಿಮಾಂದ್ಯ: ಸಿಎಂ

Last Updated 20 ನವೆಂಬರ್ 2017, 9:14 IST
ಅಕ್ಷರ ಗಾತ್ರ

ನಾಗಮಂಗಲ: 'ಯಡಿಯೂರಪ್ಪಗೆ  ಬುದ್ಧಿ ಇಲ್ಲ. ಈಶ್ವರಪ್ಪ ಬುದ್ಧಿಮಾಂದ್ಯ. ಅನಂತ್‌ಕುಮಾರ್ ಹೆಗಡೆಗೆ ಸಂಸ್ಕೃತಿ, ಸಂಸ್ಕಾರ ಗೊತ್ತಿಲ್ಲ. ಅವರಿಗೆ ನನ್ನನ್ನು ಕಂಡರೆ ಹೊಟ್ಟೆ ಕಿಚ್ಚು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಕನಕ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

'ಜೈಲಿಗೆ ಹೋಗಿ ಬಂದ ಗಿರಾಕಿ ನನ್ನನ್ನು ಕಮಿಷನ್ ಏಜೆಂಟ್ ಅಂದಿದ್ದಾರೆ. ಅಷ್ಟು ಕೀಳಾಗಿ ನಾನು ಮಾತನಾಡಲಾರೆ. ದಾಖಲೆ ಸಮೇತ ನಾನು ಮಾಡಿರುವ ಭ್ರಷ್ಟಚಾರ ತೋರಿಸಿದರೆ ಸಾರ್ವಜನಿಕ ಜೀವನದಲ್ಲೇ ಉಳಿಯುವುದಿಲ್ಲ' ಎಂದರು.

ಸೋನಿಯಾ ಗಾಂಧಿ ಅವರಿಂದ ಮುಖ್ಯಮಂತ್ರಿ ಆದೆ:

‘1999, 2004ರಲ್ಲಿ ನಾನು ಮುಖ್ಯಮಂತ್ರಿ ಆಗಬೇಕಿತ್ತು. ಆದರೆ ತಪ್ಪಿಸಿದರು. ಜೆಡಿಎಸ್‌ನಲ್ಲಿ ಇದ್ದಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಿರಲಿಲ್ಲ. ಸೋನಿಯಾ ಗಾಂಧಿ ಹಾಗೂ ಜನರಿಂದ ನಾನು ಮುಖ್ಯಮಂತ್ರಿ ಆದೆ' ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT