ನಂತರ ಸ್ಥಳಕ್ಕೆ ಭೇಟಿ ನೀಡಿದ ಡಿ.ಕೆ.ಲಿಂಗರಾಜು ಮಾತನಾಡಿ, ಕಾರ್ಯಾಚರಣೆ ವೇಳೆಯಲ್ಲಿ ತಿಳಿಯದೆ ಸಿಬ್ಬಂದಿ ಹಣ್ಣಿನ ಅಂಗಡಿ ತೆರವು ಮಾಡಿದ್ದಾರೆ. ಚರಂಡಿ ಹಿಂದೆ ಇರುವುದನ್ನು ಗಮನಿಸಿಲ್ಲ. ದಾಖಲೆ ಪರಿಶೀಲಿಸಿ, ತಪ್ಪಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಪಟ್ಟಣದ ಅಭಿವೃದ್ಥಿಗೆ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.