ಗ್ರಾಮದಲ್ಲಿ ಸೋಮವಾರ ರಾತ್ರಿ ಮುನಿಸ್ವಾಮಿ ಎಂಬುವವರು ಮೃತಪಟ್ಟಿದ್ದರು. ಅವರ ಶವ ಹೂಳಲು ಜಾಗವಿಲ್ಲದ ಕಾರಣಕ್ಕೆ ಗ್ರಾಮಸ್ಥರು ಮಂಗಳವಾರ ಬೆಳಿಗ್ಗೆಯಿಂದಲೇ ಶವದೊಂದಿಗೆ ಪ್ರತಿಭಟನೆ ಆರಂಭಿಸಿದರು. ಈ ಸುದ್ದಿ ತಿಳಿಯುತ್ತಿದ್ದಂತೆ ಎಚ್ಚೆತ್ತುಕೊಂಡು ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ಅಧಿಕಾರಿಗಳು ಮಂಗಳವಾರ ಗ್ರಾಮಕ್ಕೆ ಕಂದಾಯ ನಿರೀಕ್ಷಕ ಮತ್ತು ಸರ್ವೇಯರ್ ಅವರನ್ನು ಕಳುಹಿಸಿ ಕೊಟ್ಟರು.