ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪ್ರತಿಷ್ಠೆಗೆ ರೈತರ ಬಲಿ ಸಲ್ಲ

Last Updated 25 ನವೆಂಬರ್ 2017, 7:28 IST
ಅಕ್ಷರ ಗಾತ್ರ

ನರಗುಂದ: ‘ಮಹದಾಯಿ ಯೋಜನೆ ಜಾರಿಯಾಗಬೇಕು ಎಂದು ರೈತರು ನಿರಂತರ ಹೋರಾಟ ನಡೆಸುತ್ತಿದ್ದಾರೆ. ಜನಪ್ರತಿನಿಧಿಗಳು ತಮ್ಮ ರಾಜಕೀಯ ಪ್ರತಿ
ಷ್ಠೆಗೆ ರೈತರ ಹಿತ ಬಲಿ ಕೊಡಬಾರದು’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ರಾಘವೇಂದ್ರ ಗುಜಮಾಗಡಿ ಆಗ್ರಹಿಸಿದರು. ಪಟ್ಟಣದಲ್ಲಿ ನಡೆಯುತ್ತಿರುವ ಮಹಾದಾಯಿ ಧರಣಿಯ 863ನೇ ದಿನ ಶುಕ್ರವಾರ ಅವರು ಮಾತನಾಡಿದರು.

‘ಹಲವು ತಂತ್ರ, ಕುತಂತ್ರಗಳ ಮೂಲಕ ಮಹದಾಯಿ ಹೋರಾಟ ಹತ್ತಿಕ್ಕುವ ವ್ಯವಸ್ಥಿತ ಪಿತೂರಿ ನಡೆದಿದೆ. ಆದರೆ, ಇದುವರೆಗೆ ಇದರಲ್ಲಿ ಯಶಸ್ಸು ಲಭಿಸಿಲ್ಲ. ಜನಪ್ರತಿನಿಧಿಗಳು ಈಗಲೂ ಇದೇ ತಂತ್ರ ಅನುಸರಿಸಿದರೆ ರೈತರು ಬಗ್ಗುವುದಿಲ್ಲ. ಬದಲಾಗಿ ಚುನಾವಣೆ ಸಂದರ್ಭದಲ್ಲಿ ಪಾಠ ಕಲಿಸುತ್ತಾರೆ’ ಎಂದು ಅವರು ಎಚ್ಚರಿಕೆ ನೀಡಿದರು.

‘ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಹದಾಯಿ ಸಮಸ್ಯೆಯತ್ತ ಗಮನ ಹರಿಸಬೇಕಾದ ತುರ್ತು ಅಗತ್ಯವಿದೆ. ಆದರೆ, ಕಣ್ಣಿದ್ದೂ ಕುರುಡರಂತೆ ವರ್ತಿಸುತ್ತಿರುವ ಈ ಭಾಗದ ಶಾಸಕ, ಸಂಸದರ ಧೋರಣೆ ಸರಿಯಲ್ಲ’ ಎಂದರು.

‘ಪ್ರಧಾನಿ ಅಂತರರಾಷ್ಟ್ರೀಯ ಸಂಬಂಧ ವೃದ್ಧಿಗೆ ಶ್ರಮಿಸುವಂತೆ ರೈತರ ಅಭಿವೃದ್ಧಿಯ ವಿಷಯದಲ್ಲಿ ಪ್ರಯತ್ನಿಸುತ್ತಿಲ್ಲ. ಇದರಿಂದ ರೈತರು ತೊಂದರೆಗೆ ಒಳಗಾಗಿದ್ದಾರೆ. ಮಹದಾಯಿ ನೀರು ಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಯತ್ನ ಮಾಡಬೇಕು. ನಾಲ್ಕು ಜಿಲ್ಲೆಗಳ ರೈತರಿಗೆ ಮಹದಾಯಿ ನೀರು ಬಹಳ ಅವಶ್ಯವಾಗಿದೆ. ಈ ಕುರಿತು ನಿರ್ಲಕ್ಷ್ಯ ತೋರಿಸಿದರೆ ಜನನಾಯಕರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ’ ಎಂದು ಮಹದಾಯಿ ಹೋರಾಟ ಸಮಿತಿ ಉಪಾಧ್ಯಕ್ಷ ಪರಶುರಾಮ ಜಂಬಗಿ ಹೇಳಿದರು.

ವೀರಬಸಪ್ಪ ಹೂಗಾರ, ಸೋಮಲಿಂಗಪ್ಪ ಆಯಟ್ಟಿ, ಎಸ್‌.ಕೆ.ಗಿರಿಯಣ್ಣವರ, ವೀರಣ್ಣ ಸೊಪ್ಪಿನ, ಯಲ್ಲಪ್ಪ ಗುಡದೇರಿ, ಚನ್ನಪ್ಪಗೌಡ ಪಾಟೀಲ, ಸಿದ್ದಪ್ಪ ಚಂದ್ರತ್ನವರ, ಹುನುಮಂತ ಪಡೆಸೂರು, ಚನ್ನಬಸು ಹುಲಜೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT