ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ, ಪಂಚ ಕಜ್ಜಾಯ ಸೇವೆ, ಹಣ್ಣು ಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ ಜರುಗಿದವು. ಬಳಿಕ ಅನ್ನಸಂತರ್ಪಣೆ ನಡೆಯಿತು. ಆದರೆ, ಈ ಬಾರಿ ಪೂಜೆಯೇ ವಿಳಂಬವಾದ ಕಾರಣ ಭಕ್ತರು ಕಾದು ಕಾದು ಸುಸ್ತಾದರು. ಮಧ್ಯಾಹ್ನ 2ಕ್ಕೆ ಅನ್ನಸಂತರ್ಪಣೆ ಆರಂಭಗೊಂಡಿತು. ವಯಸ್ಕರು, ಪುಟ್ಟ ಮಕ್ಕಳು ಹಾಗೂ ಮಹಿಳೆಯರು ಬಿಸಿಲಿನಲ್ಲೇ ಕಾದರು.