ಚಂಪಾ ಅವರ ಮಾತಿಗೆ ಸಮ್ಮೇಳನದ ವೇದಿಕೆಯಲ್ಲಿ ಶನಿವಾರ ಪ್ರತಿಕ್ರಿಯಿಸಿದ ತನ್ವೀರ್ ಸೇಠ್, 'ಭಾಷೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾನು ಮಾಡಿರುವ ಕೆಲಸ ನನಗೆ ತೃಪ್ತಿ ನೀಡಿದೆ. ಕನ್ನಡ ನಾಡು- ನುಡಿ, ನೆಲ- ಜಲ ರಕ್ಷಣೆಯ ವಿಚಾರದಲ್ಲಿ ನಮ್ಮ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಕನ್ನಡದ ಕೆಲಸ ಮಾಡಲು ಅಧಿಕಾರವೇ ಬೇಕೆಂದಿಲ್ಲ. ಕನ್ನಡ ಭಾಷೆ ವಿಷಯದಲ್ಲಿ ನಾನು ಬೇರೆಯವರಿಂದ ಕಲಿಯಬೇಕಾದ ಅಗತ್ಯವಿಲ್ಲ. ಕೊನೆಯ ಉಸಿರು ಇರುವವರೆಗೂ ನಾನು ಕನ್ನಡಕ್ಕಾಗಿ ಹೋರಾಡುತ್ತೇನೆ' ಎಂದರು.