ಅಂಬೇಡ್ಕರ್ ರಚಿಸಿರುವ ಸಂವಿಧಾನ ಬದಲಾವಣೆಗೆ ಒತ್ತಾಯಿಸಿರುವುದಾಗಿ ಭಾವಿಸಿ ಪ್ರತಿಭಟಿಸುತ್ತಿದ್ದಾರೆ ಎಂದು ಪತ್ರಕರ್ತರೊಬ್ಬರು ಹೇಳಿದಾಗ ಪ್ರತಿಕ್ರಿಯಿಸಿದ ಸ್ವಾಮೀಜಿ, ‘ಅಂಬೇಡ್ಕರ್ ಅವರೊಬ್ಬರೇ ಸಂವಿಧಾನ ರಚಿಸಿಲ್ಲ. ಹಲವು ತಜ್ಞರು ಒಗ್ಗೂಡಿ ರಚಿಸಿದ್ದಾರೆ. ಅಂಬೇಡ್ಕರ್ ಅವರೂ ಒಬ್ಬರಾಗಿದ್ದು, ಸಮಿತಿಯ ಅಧ್ಯಕ್ಷ ಸ್ಥಾನದಲ್ಲಿದ್ದರು’ ಎಂದರು.