ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಭೇಟಿಗೆ ಸಿದ್ಧತೆ

Last Updated 26 ನವೆಂಬರ್ 2017, 7:22 IST
ಅಕ್ಷರ ಗಾತ್ರ

ಮುಂಡಗೋಡ: ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ.7ರಂದು ತಾಲ್ಲೂಕಿಗೆ ಆಗಮಿಸುವ ಕಾರಣ ತಹಶೀಲ್ದಾರ್‌ ಅಶೋಕ ಗುರಾಣಿ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಶನಿವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದರು.

ತಾಲ್ಲೂಕಾ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ‘ಉಸ್ತುವಾರಿ ಸಚಿವ ಆರ್‌.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಯಲ್ಲಾಪುರದಲ್ಲಿ ಭಾನುವಾರ ಅಧಿಕಾರಿಗಳ ಸಭೆ ನಡೆಯಲಿದೆ. ಅಲ್ಲಿ ಮುಖ್ಯಮಂತ್ರಿ ಉದ್ಘಾಟಿಸುವ ಕಾಮಗಾರಿಗಳನ್ನು ಉಸ್ತುವಾರಿ ಸಚಿವರು, ಶಾಸಕರು ನಿರ್ಧರಿಸಲಿದ್ದಾರೆ’ ಎಂದು ತಹಶೀಲ್ದಾರ್‌ ಅಶೋಕ ಗುರಾಣಿ ಹೇಳಿದರು.

ತಾಲ್ಲೂಕು ಪಂಚಾಯ್ತಿ ಇಓ ಬಿ.ಎಲ್‌.ಭೈರವಾಡಗಿ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಂಗನಬಸಯ್ಯ, ಸಿಪಿಐ ಕಿರಣಕುಮಾರ ನಾಯಕ, ಕೃಷಿ ಅಧಿಕಾರಿ ಎಂ.ಎಸ್‌.ಕುಲಕರ್ಣಿ, ಎಸಿಎಫ್‌ ಜಿ.ಆರ್‌.ಶಶಿಧರ, ಪಶುವೈದ್ಯಾಧಿಕಾರಿ ರವೀಂದ್ರ ಹುಜರಿತ್ತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT