ಕಾರ್ಯಕ್ರಮ ನಡೆಯುವ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಭರದ ಸಿದ್ಧತೆ ನಡೆಯಿತು. ಹಿಂದೆಯೂ ಹಲವು ಬಾರಿ ಮುಖ್ಯಮಂತ್ರಿ ಕಾರ್ಯಕ್ರಮ ಇಲ್ಲಿ ನಿಗದಿಯಾಗಿತ್ತು. ಆದರೆ, ಕೊನೆಯ ಕ್ಷಣಗಳಲ್ಲಿ ರದ್ದಾಗಿದ್ದವು. ಈ ಸಲ ನಿಶ್ಚಿತ ಬರುವ ವಿಶ್ವಾಸ ಹೊಂದಿರುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಅವಿರತವಾಗಿ ಶ್ರಮಿಸುತ್ತಿದ್ದಾರೆ. ಮಲಪ್ರಭೆಗಳ ಕಾಲುವೆ ನವೀಕರಣ, ಎಂಜನಿಯರಿಂಗ್ ಕಾಲೇಜು ಕಟ್ಟಡಕ್ಕೆ ಅಡಿಗಲ್ಲು, ಪಟ್ಟಣಕ್ಕೆ ಕುಡಿಯುವ ನೀರಿನ ಪೂರೈಕೆಗೆ, 510 ಕೃಷಿ ಹೊಂಡಗಳ ನಿರ್ಮಾಣ, ಕೃಷಿ ಡಿಪ್ಲೋಮಾ ಕಾಲೇಜು ಹಾಗೂ ಕಿತ್ತೂರು ಚೆನ್ನಮ್ಮ ವಸತಿ ಶಾಲೆ ನಿರ್ಮಾಣಕ್ಕೆ, ರಡ್ಡೆರನಾಗನೂರಿನ ಸೋಲಾರ್ ಪವರ ಯೋಜನೆಗೆ ಚಾಲನೆ ಸೇರಿದಂತೆ ಒಟ್ಟು ₹ 2 ಸಾವಿರ ಕೋಟಿ ಮೊತ್ತದ 15ಕ್ಕೂ ಹೆಚ್ಚು ಕಾಮಗಾರಿಗೆ ಅವರು ಚಾಲನೆ ನೀಡಲಿದ್ದಾರೆ.